ವಾಯುದಾಳಿಯು ಕರ್ನಾಟಕದಲ್ಲಿ 22 ಸ್ಥಾನಗಳನ್ನು ಗೆಲ್ಲಲು ನೆರವಾಗಲಿದೆ ಎಂದ ಯಡಿಯೂರಪ್ಪ

ವಾಯುದಾಳಿಯು ಕರ್ನಾಟಕದಲ್ಲಿ 22 ಸ್ಥಾನಗಳನ್ನು ಗೆಲ್ಲಲು ನೆರವಾಗಲಿದೆ ಎಂದ ಯಡಿಯೂರಪ್ಪ

ಬಿಜೆಪಿಯ ನಿಜ ಮನಸ್ಥಿತಿ ಹೊರಹಾಕಿದೆ ಎಂದು ನೆಟ್ಟಿಗರ ಆಕ್ರೋಶ

ಚಿತ್ರದುರ್ಗ, ಫೆ.28, ನ್ಯೂಸ್‍ ಎಕ್ಸ್ ಪ್ರೆಸ್: ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ವಾಯು ಸೇನೆಯು ನಡೆಸಿದ ವೈಮಾನಿಕ ದಾಳಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ 22 ಸ್ಥಾನಗಳನ್ನು ಗೆಲ್ಲಲು ಬಿಜೆಪಿಗೆ ನೆರವಾಗಲಿದೆ ಎಂದು ಹೇಳಿದ್ದಾರೆ.

ಪಾಕಿಸ್ತಾನದ ಒಂದು ಯುದ್ಧ ವಿಮಾನವನ್ನು ಈಗಾಗಲೇ ಹೊಡೆದುರಳಿಸಲಾಗಿದೆ. ಹುತಾತ್ಮ 42 ಯೋಧರ ಒಂದೊಂದು ರಕ್ತದ ಹನಿಗೂ ಸೇಡು ತೀರಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅದನ್ನು ಮಾಡಿ ತೋರಿಸುತ್ತಿದ್ದಾರೆ. ಪ್ರತಿಪಕ್ಷ ಸೇರಿದಂತೆ ದೇಶದ ಜನರು ಇದನ್ನು ಸ್ವಾಗತಿಸಿದ್ದಾರೆ. ಪಾಕ್ ಮೇಲಿನ ದಾಳಿಯನ್ನು ಯುವಕರು ಸಂಭ್ರಮಿಸಿದ್ದಾರೆ. ಇದು ಬಿಜೆಪಿಗೆ ನೆರವಾಗಲಿದೆ ಎಂದು ಹೇಳುವ ಮೂಲಕ ದೇಶದ ಜನತೆಯ ಕೆಂಗೆಣ್ಣಿಗೆ ಗುರಿಯಾಗಿದ್ದಾರೆ.

ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಯೋಧರ ತ್ಯಾಗವನ್ನು ಬಿಜೆಪಿ ರಾಜಕೀಯ ಲಾಭಕ್ಕೆ ಬಳಸುತ್ತಿರುವುದಕ್ಕೆ ಸಾರ್ವಜನಿಕ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos