ಬಿ.ಎಸ್.ವೈ ಸತ್ಯ ಹರಿಶ್ಚಂದ್ರನ ಮೊಮ್ಮಗನಲ್ಲ: ವಿ.ಎಸ್. ಉಗ್ರಪ್ಪ

ಬಿ.ಎಸ್.ವೈ ಸತ್ಯ ಹರಿಶ್ಚಂದ್ರನ ಮೊಮ್ಮಗನಲ್ಲ: ವಿ.ಎಸ್. ಉಗ್ರಪ್ಪ

ಕೊಪ್ಪಳ, ಅ. 30: ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರು, ಸಿಎಂ ಬಿ.ಎಸ್.ವೈ ಎನು ಸತ್ಯ ಹರಿಶ್ಚಂದ್ರನ ಮೊಮ್ಮಗನಲ್ಲ, ಆತನೋರ್ವ ಸುಳ್ಳಿನ ಸರದಾರ. ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವುದು ಸುಳ್ಳಿನ ಸರ್ಕಾರ ಇವರಿಗೆ ನಿಜಕ್ಕೂ ಧಮ್ ಇದ್ರೆ ಈ ವಿಧಾನಸಭೆಯನ್ನು ವಿಸರ್ಜನೆ ಮಾಡಲಿ ಎಂದು ಕಿಡಿಕಾರಿದ್ದಾರೆ.

ಕೊಪ್ಪಳದಲ್ಲಿ ಇಂದು ಪತ್ರಕರ್ತರ ಜೊತೆ ಮಾತನಾಡುತ್ತಾ ಸಿಎಂ ಯಡಿಯೂರಪ್ಪ ಮತ್ತು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿರುವ ವಿ.ಎಸ್. ಉಗ್ರಪ್ಪ, “ಬಿಜೆಪಿ ನಾಯಕರು ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಜನರ ನಡುವೆ ಸುಳ್ಳುಗಳನ್ನು ಹರಡುವ ಸುಳ್ಳಿನ ರಾಜಕಾರಣ ನಡೆಸುತ್ತಿದ್ದಾರೆ. ಈ ನಡುವೆ ಕಾಂಗ್ರೆಸ್ ಶಾಶ್ವತವಾಗಿ ವಿರೋಧ ಪಕ್ಷದಲ್ಲಿರುತ್ತೆ ಎಂದು ಹೇಳಿಕೆ ನೀಡುತ್ತಾರೆ. ಬಿಜೆಪಿಯವರಿಗೆ ಧಮ್ ಇದ್ರೆ, ತಾಖತ್ ಇದ್ರೆ ವಿಧಾನಸಭೆಯನ್ನು ವಿಸರ್ಜನೆ ಮಾಡಲಿ” ಎಂದು ಸವಾಲು ಹಾಕಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos