ಶೃಂಗೇರಿ ಶಾರದಾಂಬೆ ಮೊರೆಹೋದ ಯಡಿಯೂರಪ್ಪ, ಶೋಭಾ

ಶೃಂಗೇರಿ ಶಾರದಾಂಬೆ ಮೊರೆಹೋದ ಯಡಿಯೂರಪ್ಪ, ಶೋಭಾ

ಚಿಕ್ಕಮಗಳೂರು. ಮಾ.14 , ನ್ಯೂಸ್ ಎಕ್ಸ್ ಪ್ರೆಸ್: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರು ಶೃಂಗೇರಿ ಶಾರದಾಂಬೆ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಟಿಕೆಟ್ ಘೋಷಣೆಗೂ ಮುನ್ನ ಜಗದ್ಗುರುಗಳ ನಿವಾಸಕ್ಕೆ ತೆರಳಿ ಬಿ.ಎಸ್.ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ ಅವರು ಆಶೀರ್ವಾದ ಪಡೆದರು.

ಶೃಂಗೇರಿಯ ಮಾಜಿ ಶಾಸಕ ಡಿ.ಎನ್. ಜೀವರಾಜ್ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಯಡಿಯೂರಪ್ಪ ಅವರಿಗೆ ಸಾಥ್ ನೀಡಿದರು. ಬಳಿಕ ನೇರವಾಗಿ ದೇವಸ್ಥಾನಕ್ಕೆ ತೆರಳಿ ಶಾರದಾಂಬೆಯ ದರ್ಶನವನ್ನು ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos