ಹುಬ್ಬಳ್ಳಿ, ಅ. 2 : ಕಾಶ್ಮೀರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ತಾಲೂಕಿನ ಕರಡಿಕೊಪ್ಪ ಗ್ರಾಮದ ಯೋಧ ಮಂಜುನಾಥ ಓಲೆಕಾರ (29) ಹುತಾತ್ಮರಾಗಿದ್ದಾರೆ.
ಕಾಶ್ಮೀರದ ಗಡಿಯಲ್ಲಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆ ವೇಳೆ ಗುಂಡೇಟು ತಗುಲಿ ಮಂಜುನಾಥ್ಗೆ ತೀವ್ರ ಗಾಯವಾಗಿತ್ತು. ಸೇನಾ ಆಸ್ಪತ್ರೆಗೆ ದಾಖಲಿಸದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.