ಲಿಂಗಸುಗೂರು : ಪಟ್ಟಣದ ಹೊರವಲಯದಲ್ಲಿ ರೈತ ಸಂಪರ್ಕ ಕೇಂದ್ರ ಕಟ್ಟಡ ಕಾಮಗಾರಿಗೆ ಶಾಸಕ ಡಿಎಸ್ ಹೂಲಗೇರಿ ಶಂಕುಸ್ಥಾಪನೆ ನೆರವೇರಿಸಿದರು.
ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕು ಕೇಂದ್ರದಲ್ಲಿಯೇ ರೈತ ಸಂಪರ್ಕ ಕೇಂದ್ರಕ್ಕೆ ಸ್ವಂತ ಕಟ್ಟಡವಿಲ್ಲದೇ, ಬಾಡಿಗೆ ಕಟ್ಟಡದಲ್ಲಿಯೇ ವ್ಯವಹಾರ ನಡೆಯುತ್ತಿತ್ತು.
ಈ ಬಗ್ಗೆ ರೈತರ ಹಾಗೂ ಅಧಿಕಾರಿಗಳು ಕಟ್ಟಡ ನಿರ್ಮಾಣಕ್ಕೆ ಬೇಡಿಕೆಯನ್ನು ನನ್ನ ಮುಂದಿಟ್ಟಿದ್ದರು. ಆರ್ಐಡಿಎಫ್ ಯೋಜನೆ ಯಡಿಯಲ್ಲಿ 50 ಲಕ್ಷ ರೂ.ಗಳ ಅನುದಾನದಲ್ಲಿ ಕೆಆರ್ಐಡಿಎಲ್ಗೆ ಕಟ್ಟಡವನ್ನು ನಿರ್ಮಿಸುವ ಜವಾಬ್ದಾರಿಯನ್ನು ವಹಿಸಿಕೊಡಲಾಗಿದೆ. ಅಧಿಕಾರಿಗಳು ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಬೇಕೆಂದು ಸೂಚನೆ ನೀಡಿದರು.