ಶಾಸಕ ನಿಂದ ರೈತ ಸಂಪರ್ಕ ಕೇಂದ್ರ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ

ಶಾಸಕ ನಿಂದ ರೈತ ಸಂಪರ್ಕ ಕೇಂದ್ರ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ

ಲಿಂಗಸುಗೂರು : ಪಟ್ಟಣದ ಹೊರವಲಯದಲ್ಲಿ ರೈತ ಸಂಪರ್ಕ ಕೇಂದ್ರ ಕಟ್ಟಡ ಕಾಮಗಾರಿಗೆ ಶಾಸಕ ಡಿಎಸ್ ಹೂಲಗೇರಿ ಶಂಕುಸ್ಥಾಪನೆ ನೆರವೇರಿಸಿದರು.

ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕು ಕೇಂದ್ರದಲ್ಲಿಯೇ ರೈತ ಸಂಪರ್ಕ ಕೇಂದ್ರಕ್ಕೆ ಸ್ವಂತ ಕಟ್ಟಡವಿಲ್ಲದೇ, ಬಾಡಿಗೆ ಕಟ್ಟಡದಲ್ಲಿಯೇ ವ್ಯವಹಾರ ನಡೆಯುತ್ತಿತ್ತು.

ಈ ಬಗ್ಗೆ ರೈತರ ಹಾಗೂ ಅಧಿಕಾರಿಗಳು ಕಟ್ಟಡ ನಿರ್ಮಾಣಕ್ಕೆ ಬೇಡಿಕೆಯನ್ನು ನನ್ನ ಮುಂದಿಟ್ಟಿದ್ದರು. ಆರ್‌ಐಡಿಎಫ್ ಯೋಜನೆ ಯಡಿಯಲ್ಲಿ 50 ಲಕ್ಷ ರೂ.ಗಳ ಅನುದಾನದಲ್ಲಿ ಕೆಆರ್‌ಐಡಿಎಲ್‌ಗೆ ಕಟ್ಟಡವನ್ನು ನಿರ್ಮಿಸುವ ಜವಾಬ್ದಾರಿಯನ್ನು ವಹಿಸಿಕೊಡಲಾಗಿದೆ. ಅಧಿಕಾರಿಗಳು ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಬೇಕೆಂದು ಸೂಚನೆ ನೀಡಿದರು.

ಫ್ರೆಶ್ ನ್ಯೂಸ್

Latest Posts

Featured Videos