ಸರಗಳ್ಳತಕ್ಕಿಳಿದ ಖತರ್ನಾಕ್ ಪ್ರೇಮಿಗಳು

 

 

ಬೆಂಗಳೂರು, ಡಿ. 13 : ಮದುವೆಗೆ ಮುನ್ನ ಸರಗಳ್ಳತನ ಮಾಡುತ್ತಿದ್ದ ಪ್ರೇಮಿಗಳಿಬ್ಬರು ಚಂದ್ರಲೇಔಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಹರೀಶ್ ಮತ್ತು ಭೂಮಿ ಪೊಲೀಸರ ಅತಿಥಿಯಾದ ಪ್ರೇಮಿಗಳು, ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದ ಇವರು ಮದುವೆಯಾಗಲು ಹಣಕ್ಕಾಗಿ ಸರಗಳ್ಳತನ ಮಾಡಲು ಶುರು ಮಾಡಿದರು. ಕಸುಬನ್ನು ಮುಂದುವರಿಸಿ ಅಡ್ರಾಸ್ ಕೇಳುವ ನೆಪದಲ್ಲಿ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರ ಕಸಿದು ಪರಾರಿಯಾಗುತ್ತಿದ್ದರು.
ಚಂದ್ರಲೇಔಟ್ ಠಾಣೆಯಲ್ಲಿ ದೂರು ದಾಖಲಾದ ಹಿನ್ನಲೆಯಲ್ಲಿ ಸಿಸಿಟಿವಿ ಆಧಾರದ ಮೇಲೆ ತನಿಖೆ ಆರಂಭಿಸಿದ ಪೊಲೀಸರು ಇದೀಗ ಇವರಿಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos