ಬಸ್ ಗಳ ಮೇಲೆ ಕಲ್ಲು ತೂರಾಟ ವಿದ್ಯಾರ್ಥಿಗಳಿಗೆ ಗಾಯ

ಬಸ್ ಗಳ ಮೇಲೆ ಕಲ್ಲು ತೂರಾಟ ವಿದ್ಯಾರ್ಥಿಗಳಿಗೆ ಗಾಯ

ಮಂಗಳೂರು, ಜೂ.25: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಾಗುತ್ತಿದ್ದ ಬಸ್ ಗಳಿಗೆ ಎಕಾ ಏಕಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕಲ್ಲಡ್ಕ, ವಿಟ್ಲ ವ್ಯಾಪ್ತಿಯಲ್ಲಿ ಬಸ್ಸುಗಳಿಗೆ ಕಲ್ಲು ತೂರಾಟ ನಡೆಸಿದ್ದು, 2 ವಿದ್ಯಾರ್ಥಿಗಳಿಗೆ ಗಾಯವಾಗಿದೆ.

ಕುದ್ರೆಬೆಟ್ಟು, ಪಾಣೆಮಂಗಳೂರು, ಗಡಿಯಾರ ಮತ್ತು ದಾಸಕೋಡಿ ಎಂಬಲ್ಲಿ ಕಲ್ಲು ತೋರಾಟ ನಡೆದಿದೆ. ಪರಿಣಾಮ ನಾಲ್ಕು ಬಸ್ ಗಳಿಗೆ ಹಾನಿಯಾಗಿದ್ದು, ವಿದ್ಯಾರ್ಥಿಗಳಿಬ್ಬರು ಗಾಯಗೊಂಡಿದ್ದಾರೆ.

ನೆನ್ನೆ ಮದ್ಯ ರಾತ್ರಿಯಿಂದೀಚೆಗೆ ಒಟ್ಟು 6 ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿರುವುದಾಗಿ ಮಾಹಿತಿ ಲಭಿಸಿದ್ದು, ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿರುವುದಾಗಿ ದೂರಲಾಗಿದೆ. ವಿಟ್ಲ ಹಾಗೂ ಬಂಟ್ವಾಳ ಗ್ರಾಮಾಂತರ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಹೆದ್ದಾರಿ ಪ್ರದೇಶಗಳಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos