ಉಪಚುನಾವಣೆ: ಜೆಡಿಎಸ್ ನಿರಾಸಕ್ತಿಗೆ

ಉಪಚುನಾವಣೆ: ಜೆಡಿಎಸ್ ನಿರಾಸಕ್ತಿಗೆ

ಬೆಂಗಳೂರು, ಮೇ. 8, ನ್ಯೂಸ್ ಎಕ್ಸ್ ಪ್ರೆಸ್: ಕುಂದಗೋಳ, ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್, ಬಿಜೆಪಿ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸುತ್ತಿದ್ದು, ಜೆಡಿಎಸ್ ನಾಯಕರು ಮಾತ್ರ ಈ ಕ್ಷೇತ್ರಗಳಲ್ಲಿ ನಿರಾಸಕ್ತಿ ತೋರಿದ್ದು, ಕೈ ಪಾಳಯದಲ್ಲಿ ಬೇಸರ ವ್ಯಕ್ತವಾಗಿದೆ.

ಆದರೆ, ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಜೆಡಿಎಸ್ ನಾಯಕರು ಉಪಚುನಾವಣೆಗೆ ಮಾತ್ರ ಆಸಕ್ತಿ ತೋರಿಸುತ್ತಿಲ್ಲ. ಆಹ್ವಾನ ನೀಡಿ ಹಲವು ದಿನಗಳೇ ಕಳೆದರೂ ಜೆಡಿಎಸ್ ನಾಯಕರು ಮಾತ್ರ ಪ್ರಚಾರಕ್ಕೆ ಬಾರದಿರುವುದು ಕಾಂಗ್ರೆಸ್ ಪಾಳಯದಲ್ಲಿ ಬೇಸರ ವ್ಯಕ್ತವಾಗಿದೆ.

ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳು ಈ ಮೊದಲು ಕಾಂಗ್ರೆಸ್ ವಶದಲ್ಲದ್ದವು. ಮತ್ತೆ ಈ ಕ್ಷೇತ್ರಗಳನ್ನು ತಮ್ಮಲ್ಲೇ ಉಳಿಸಿಕೊಳ್ಳಲು ಕೈ ನಾಯಕರು ಕಸರತ್ತು ನಡೆಸುತ್ತಿದ್ದು, ಈ ಕ್ಷೇತ್ರಗಳ ಪ್ರಚಾರಕ್ಕಾಗಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ ಕಾಂಗ್ರೆಸ್ ನಾಯಕರು ಅಹ್ವಾನ ನೀಡಿದ್ದರು ಎನ್ನಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos