ಕುಂದಗೋಳ, ಮೇ. 13, ನ್ಯೂಸ್ ಎಕ್ಸ್ ಪ್ರೆಸ್: ಇಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರಕ್ಕೆ ತೆರಳಲಿದ್ದಾರೆ.
ಮಡಿಕೇರಿಯಿಂದ ನಿನ್ನೆಯಷ್ಟೇ ಮುಖ್ಯಮಂತ್ರಿ ಕುಮಾರಸ್ವಾಮಿ ಬೆಂಗಳೂರಿಗೆ ಬಂದಿದ್ದರು. ಇಂದು ಬೆಳಗ್ಗೆ ಕುಂದಗೋಳಕ್ಕೆ ತೆರಳಿದ್ದಾರೆ. ಅಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. ನಾಳೆ ಚಿಂಚೋಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. ಈ ಮೂಲಕ ಉಪಚುನಾವಣೆಗೆ ಜೆಡಿಎಸ್ ಆಸಕ್ತಿ ತೋರುತ್ತಿಲ್ಲ ಎನ್ನುವ ಪ್ರಶ್ನೆಗೆ ತೆರೆ ಎಳೆದಿದ್ದಾರೆ.
2 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ.ಉಪಚುನಾವಣೆಯಲ್ಲೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರಿಸಿದೆ.