ಹುಬ್ಬಳ್ಳಿ, ಮೇ.17, ನ್ಯೂಸ್ ಎಕ್ಸ್ ಪ್ರೆಸ್: ಕುಂದಗೋಳ, ಚಿಂಚೋಳಿ ಉಪಚುನಾವಣೆ ಕಾವು ಜೋರಾಗಿದೆ. ಇವತ್ತು ಕುಂದಗೋಳ ವಿಧಾನಸಭೆ ಉಪಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ತೆರೆಬೀಳಲಿದೆ. ಹೀಗಾಗಿ, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಕೊನೆಗಳಿಗೆಯ ಕಸರತ್ತು ನಡೆಸ್ತಿವೆ.
ಇನ್ನು ಬಿಜೆಪಿ ಅಭ್ಯರ್ಥಿ ಎಸ್.ಐ. ಚಿಕ್ಕನಗೌಡ್ರು ಪರ ಬಿಜೆಪಿ ನಾಯಕರು ಮತಯಾಚನೆ ಮಾಡುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಮಾಜಿ ಸಿಎಂ ಜಗದೀಶ್ ಶೇಟ್ಟರ್ ಸೇರಿದಂತೆ ಹಲವು ಕಮಲ ನಾಯಕರು ಕೊನೆಯ ಹಂತದ ಸರ್ಕಸ್ ನಲ್ಲಿ ತೊಡಗಿದ್ದಾರೆ. ಇತ್ತ ಮೈತ್ರಿ ಅಭ್ಯರ್ಥಿ ಕುಸುಮಾ ಶಿವಳ್ಳಿ ಪರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಮತಯಾಚನೆ ಮಾಡ್ತಿದ್ದು, ಡಿ.ಕೆ.ಸುರೇಶ್ ಸೇರಿದಂತೆ ಹಲವು ಮೈತ್ರಿ ನಾಯಕರು ಸಾಥ್ ನೀಡಿದ್ದಾರೆ.