ವಿಕಸಿತ ಭಾರತ ನಿರ್ಮಿಸಿ ಭಾರತ ಗೆಲ್ಲಿಸುವ ಚುನಾವಣೆ‌ ಇದಾಗಬೇಕು: “ವಿಜಯೇಂದ್ರ”

ವಿಕಸಿತ ಭಾರತ ನಿರ್ಮಿಸಿ ಭಾರತ ಗೆಲ್ಲಿಸುವ ಚುನಾವಣೆ‌ ಇದಾಗಬೇಕು: “ವಿಜಯೇಂದ್ರ”

ಬೆಂಗಳೂರು: ಅರಮನೆ ಮೈದಾನದ ವೃಕ್ಷ ಸಭಾಂಗಣದಲ್ಲಿ ಇಂದು ಆಯೋಜಿಸಿರುವ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

2024ರ ಈ ಲೋಕಸಭಾ ಚುನಾವಣೆಯು ವಿಕಸಿತ ಭಾರತ ನಿರ್ಮಿಸಿ ಭಾರತ ಗೆಲ್ಲಿಸುವ ಚುನಾವಣೆಯಾಗಿದೆ. ರಾಜ್ಯ ಚುನಾವಣಾ ಸಮಿತಿಯು ಜವಾಬ್ದಾರಿಯುತ ಸ್ಥಾನ ನಿರ್ವಹಿಸಲಿದ್ದು, ಅತ್ಯಂತ ಕ್ರಿಯಾಶೀಲ ನಿರ್ವಹಣೆಯ ಮೂಲಕ ಯಶಸ್ವಿಯಾಗಿ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ ನೀಡಿದರು.

ಈ ಸಂದರ್ಭದಲ್ಲಿ ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ಕಾರ್ಯ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ. ಸುನೀಲ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೀತಂ ಗೌಡ, ಪಿ.ರಾಜೀವ್, ಹಾಗೂ ಚುನಾವಣಾ ನಿರ್ವಹಣಾ ಸಮಿತಿಯ ಸದಸ್ಯರು ಭಾಗವಹಿಸಿದ್ದರು

ಫ್ರೆಶ್ ನ್ಯೂಸ್

Latest Posts

Featured Videos