ಡಿಕೆಶಿಗೆ ಫುಲ್ ಡಿಮ್ಯಾಂಡ್..!

ಡಿಕೆಶಿಗೆ ಫುಲ್ ಡಿಮ್ಯಾಂಡ್..!

ಬೆಂಗಳೂರು, ಅ. 31 : ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಉಪ ಚುನಾವಣೆ ಉಸ್ತುವಾರಿ ನೀಡಬೇಕೆಂದು ಕ್ಷೇತ್ರಗಳ ನಾಯಕರಿಂದ ತೀವ್ರ ಒತ್ತಡ ಕೇಳಿ ಬಂದಿದೆ. ಮೊದಲು ಡಿ.ಕೆ.ಶಿವಕುಮಾರ್ ಅವರು ಜವಾಬ್ದಾರಿ ವಹಿಸಿಕೊಂಡ ಕ್ಷೇತ್ರಗಳ ಪೈಕಿ ಶಿವಮೊಗ್ಗ ಲೋಕಸಭೆ ಹೊರತುಪಡಿಸಿ ಉಳಿದೆಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ.
ಕೆಪಿಸಿಸಿ ಅಧ್ಯಕ್ಷರನ್ನು ನಿರಂತರವಾಗಿ ಭೇಟಿ ಮಾಡುತ್ತಿರುವ ಉಪಚುನಾವಣೆ ನಡೆಯುವ ಕ್ಷೇತ್ರಗಳ ಟಿಕೆಟ್ ಆಕಾಂಕ್ಷಿಗಳು, ನಮಗೆ ಟಿಕೆಟ್ ನೀಡಬೇಕು ಎಂಬ ಲಾಬಿಯ ಜತೆಗೆ ಡಿ.ಕೆ.ಶಿವಕುಮಾರ್ ಅವರಿಗೆ ಚುನಾವಣಾ ಉಸ್ತುವಾರಿ ನೀಡಿ ಎಂದು ಒತ್ತಡ ಹೇರುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos