ಬೆಂಗಳೂರು,ಸೆ. 05 : ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಬೈಕ್ಗೆ ಹಾಲು ಪೂರೈಕೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಹಾಯಕ ಸಬ್ ಇನ್ಸ್ಪೆಕ್ಟರ್ವೊಬ್ಬರು (ಎಎಸ್ಐ) ಸಾವನ್ನಪ್ಪಿರುವ ಘಟನೆ ಯಲಹಂಕ ಸಮೀಪ ನಡೆದಿದೆ.
ದೇವನಹಳ್ಳಿ ಸಂಚಾರ ಠಾಣೆ ಎಎಸ್ಐ ವೆಂಕಟರಾಮು (55) ಮೃತರು. ಕೆಲಸ ಮುಗಿಸಿಕೊಂಡು ಮಂಗಳವಾರ ರಾತ್ರಿ 10.30ರ ಸುಮಾರಿಗೆ ಅವರು ಮನೆಗೆ ತೆರಳುವಾಗ ಜಕ್ಕೂರು ಸವೀರ್ಸ್ ರಸ್ತೆಯಲ್ಲಿ ಘಟನೆ ನಡೆದಿದೆ. ಕೃತ್ಯ ಎಸಗಿ ಪರಾರಿಯಾಗಿರುವ ಚಾಲಕನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.