ಮಂಡ್ಯ, ಏ. 12, ನ್ಯೂಸ್ ಎಕ್ಸ್ ಪ್ರೆಸ್: ಪ್ರಕಾಶ್ ರೌಡಿ ಶೀಟರ್ ಸಿಎಂ ಕುಮಾರಸ್ವಾಮಿ ಬೆಂಗಾವಲು ಪಡೆಯ ವಾಹನದಲ್ಲಿ ಕಾಣಿಸಿಕೊಂಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.
ಮಳವಳ್ಳಿ ತಾಲೂಕಿನ ಕಿರುಗಾವಲು ವ್ಯಾಪ್ತಿಯಲ್ಲಿ ಸಿಎಂ ರೋಡ್ ಶೋ ವೇಳೆ ರೌಡಿ ಶೀಟರ್ ಪ್ರಕಾಶ್ ಮುಖ್ಯಮಂತ್ರಿ ಕುಮಾರಸ್ವಾಮಿ ಬೆಂಗಾವಲು ಪಡೆ ವಾಹನದಲ್ಲಿ ಕುಳಿತು ಕೊಂಡಿದ್ದಾನೆ ಎನ್ನಲಾಗಿದೆ.
ಹೀಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಬೆಂಗಾವಲು ಪಡೆ ವಾಹನದಲ್ಲಿ ರೌಡಿ ಶೀಟರ್ ನನ್ನು ಪೊಲೀಸ್ ಇಲಾಖೆ ಕೂರಿಸಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಅಂತ ಸ್ಥಳೀಯ ಜನತೆ ಪ್ರಶ್ನೆ ಮಾಡುತ್ತಿದ್ದಾರೆ.