ನಾಮಪತ್ರ ಸಲ್ಲಿಸಿದ ಡಾ. ಸಿ.ಎನ್ ಮಂಜುನಾಥ್

ನಾಮಪತ್ರ ಸಲ್ಲಿಸಿದ ಡಾ. ಸಿ.ಎನ್ ಮಂಜುನಾಥ್

ರಾಮನಗರ: ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು ರಾಜ್ಯದಲ್ಲೇ ಅಭ್ಯರ್ಥಿಗಳು ನಾಮ ಪತ್ರಿಕೆಯನ್ನು ಸಲ್ಲಿಸುತ್ತಿದ್ದಾರೆ  ಇಂದು ನಾಮಪತ್ರಿಕೆ ಸಲ್ಲಿಕೆಗೆ ಕೊನೆ ದಿನಾಂಕವಾಗಿರುವುದರಿಂದ ಎಲ್ಲಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿಕೆಗೆ ಮುಂದಾಗಿದ್ದಾರೆ

ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರು ಗ್ರಾಮಾಂತರದ ಬಿಜೆಪಿ ಅಭ್ಯರ್ಥಿಯಾಗಿ ಇಂದು ಡಾ.‌ಸಿ.ಎನ್ ಮಂಜುನಾಥ್ ಅವರು ಇಂದು 11:30 ಕ್ಕೆ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ರಾಮನಗರ‌ದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಡಾ.ಸಿ.ಎನ್ ಮಂಜುನಾಥ್  ಅವರು, ನಂತರ ಮೆರವಣಿಗೆ ಮೂಲಕ ಪಿಡಬ್ಲ್ಯುಡಿ  ಸರ್ಕಲ್​​ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಸಾಗಿ ಬಳಿಕ ನಾಮಪತ್ರ ಸಲ್ಲಿಸಿದರು. ಬಳಿಕ ರಾಮನಗರ ಆಂಜನೇಯ ದ್ವಾರದ ಮುಂಭಾಗದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos