ಸಿಎಎ ವಿರುದ್ಧ ಗಾಂಧಿ ಮೊಮ್ಮಗ ಪ್ರತಿಭಟನೆ

ಸಿಎಎ ವಿರುದ್ಧ ಗಾಂಧಿ ಮೊಮ್ಮಗ ಪ್ರತಿಭಟನೆ

ಬೆಂಗಳೂರು, 27. ಜ. : ಪೌರತ್ವ ತಿದ್ದುಪಡಿ ಕಾಯಿದೆ ಸಂಪೂರ್ಣ ಸಂವಿಧಾನ ವಿರೋಧಿಯಾಗಿದ್ದು, ಇದನ್ನು ಕೇಂದ್ರ ಸರಕಾರ ಹಿಂಪಡೆಯಲೇಬೇಕು. ಇಲ್ಲದಿದ್ದರೆ ಮತ್ತಷ್ಟು ಮಂದಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಾರೆ ಎಂದು ಮಹಾತ್ಮ ಗಾಂಧಿ ಅವರ ಮೊಮ್ಮಗ ರಾಜಮೋಹನ್ ಗಾಂಧಿ ಹೇಳಿದರು.ಆದಿವಾಸಿ, ಅಲೆಮಾರಿ, ದಲಿತ ಮತ್ತು ಹಿಂದುಳಿದ ಜಾತಿ ಸಂಘಟನೆಗಳ ವೇದಿಕೆ, ‘ನಾವು ಭಾರತೀಯರು’ಸಂಘಟಧಿನೆ ನೇತತ್ವದಲ್ಲಿ ಸಿಎಎ, ಎನ್ಪಿಆರ್, ಎನ್ಆರ್ಸಿ ಹಾಗೂ ಇವಿಎಂ ವಿರುದ್ಧ ಹಮ್ಮಿಕೊಂಡಿದ್ದ ಸಂವಿಧಾನದ ಉಳಿವಿಗಾಗಿ ಪ್ರತಿಭಟನಾ ರಾರಯಲಿ ಮತ್ತು ಜನಜಾಗೃತಿ ಆಂದೋಲನ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಭಾರತದಲ್ಲಿ ಏಳು ದಶಕಗಳಲ್ಲೇ ಮೊದಲ ಬಾರಿಗೆ ಧರ್ಮದ ಆಧಾರದಲ್ಲಿ ಪೌರತ್ವ ನೀಡಲಾಗುತ್ತಿದೆ. ಇದು ಸಂವಿಧಾನ ವಿರೋಧಿ. ಒಂದು ಜಾತಿ, ಧರ್ಮವನ್ನು ಹೊರಗಿಟ್ಟು ಕಾನೂನು ರೂಪಿಸುವ ಅವಶ್ಯಕತೆ ಇಲ್ಲ. ಕೇಂದ್ರ ಸರಕಾರ ಎಲ್ಲರಿಗೂ ಒಳಿತಾಗುವ ಕಾನೂನು ರೂಪಿಸಬೇಕು,” ಎಂದರು.

ಫ್ರೆಶ್ ನ್ಯೂಸ್

Latest Posts

Featured Videos