ಬೆಂಗಳೂರು: 2019 ರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಿದ ನಂತರ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ಮತ್ತು ತಮಿಳುಗ ವೆಟ್ರಿ ಕಳಗಂ ಮುಖ್ಯಸ್ಥ ದಳಪತಿ ವಿಜಯ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಡಿಸೆಂಬರ್ 31 2014ಕ್ಕೂ ಮುಂಚೆ ಪಾಕಿಸ್ತಾನ, ಬಾಂಗ್ಲಾದೇಶ, ಹಾಗೂ ಅಫ್ಘಾನಿಸ್ತದಿಂದ ಭಾರತಕ್ಕೆ ವಲಸೆ ಬಂದಿರುವ ದಾಖಲೆ ರಹಿತ ಮುಸ್ಲಿಂಮೇತರ ವಲಸಿಗರಿಕೆ ತ್ವರಿತ ಗತಿಯಲ್ಲಿ ಪೌರತ್ವ ನೀಡುವ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯ ಜಾರಿಗೆ 4 ವರ್ಷಗಳ ನಂತರ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಸೋಮವಾರ ಅಧಿಸೂಚನೆ ಹೊರಡಿಸಿದೆ.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ನಟ ವಿಜಯ್ ಎಲ್ಲಾ ಸಮುದಾಯದವರು ಸೌಹಾರ್ದತೆಯಿಂದ ಬದುಕುತ್ತಿರುವ ದೇಶವೊಂದರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆಯು ಸ್ವೀಕಾರಾರ್ಹವಲ್ಲಾ ಎಂದು ಹೇಳಿದ್ದಾರೆ, ಇದರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಮಿಳುನಾಡಿನಲ್ಲಿ ಜಾರಿಗೊಳಿಸಬಾರದು ಎಂದು ಅವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.