ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ: ಸಿಎಂ

ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ: ಸಿಎಂ

ಬೆಂಗಳೂರು, ಡಿ. 12: ಉಪಚುನಾವಣೆ ಫಲಿತಾಂಶ ಬಂದ ಕೂಡಲೇ ಸಿಎಂ ಸಂಪುಟ ವಿಸ್ತರಣೆಯಾಗಿ ತಾವೆಲ್ಲರೂ ಮಂತ್ರಿಗಳಾಗುತ್ತೇವೆಂದು ಎಣಿಸಿದ್ದ ಶಾಸಕರು ಇನ್ನೂ ಒಂದು ವಾರ ಕಾಯಬೇಕಾದ ಸ್ಥಿತಿ ಇದೆ. ಅಮಿತ್ ಶಾ ಅವರು ಈ ವಾರ ವಿವಿಧ ಕಾರ್ಯಗಳಲ್ಲಿ ನಿರತರಾಗಿರುವ ಹಿನ್ನೆಲೆಯಲ್ಲಿ ಅವರ ಭೇಟಿಗೆ ಸದ್ಯಕ್ಕೆ ಅವಕಾಶ ಇಲ್ಲವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಈ ವಿಚಾರವನ್ನು ನೂತನ ಶಾಸಕರಿಗೆ ತಿಳಿಸಿದ್ಧಾರೆ. ಮುಂದಿನ ವಾರ ಅವರು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಇನ್ನೂ 4-5 ದಿನ ನಾನು ದೆಹಲಿಗೆ ಹೋಗುವುದಿಲ್ಲ. ಅಮಿತ್ ಶಾ ಅವರು ಪ್ರಚಾರದಲ್ಲಿದ್ದಾರೆ. ಅವರು ಪ್ರಚಾರ ಮುಗಿಸಿ ವಾಪಸ್ ಬಂದ ನಂತರ ತಾನು ದೆಹಲಿಗೆ ಹೋಗಿ ಅವರನ್ನು ಭೇಟಿಯಾಗಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುತ್ತೇನೆ ಎಂದು ಸಚಿವಾಕಾಂಕ್ಷಿ ನೂತನ ಶಾಸಕರಿಗೆ ಸಿಎಂ ಮನದಟ್ಟು ಮಾಡಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos