ಬೆಂಗಳೂರು, ಡಿ. 19: ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಎಡಪಕ್ಷಗಳು ರಾಷ್ಟ್ರವ್ಯಾಪಿ ಇಂದು ಬಂದ್ಗೆ ಕರೆ ನೀಡಿವೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ 12 ವಿಪಕ್ಷಗಳ ನಿಯೋಗ ರಾಷ್ಟ್ರಪತಿಯವರನ್ನು ಭೇಟಿಯಾಗಿ ಪೌರತ್ವ ಕಾಯ್ದೆ ಹಿಂಪಡೆಯುವಂತೆ ಕೇಂದ್ರ ಸರಕಾರಕ್ಕೆ ಒತ್ತಾಯಿಸಿದೆ.
ಈಶಾನ್ಯ ರಾಜ್ಯ ಮತ್ತು ದೆಹಲಿಯಲ್ಲಿ ಶಾಂತ ರೀತಿಯಲ್ಲಿ ವಿರೋಧ ವ್ಯಕ್ತಪಡಿಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ದಾಳಿ ನಡೆಸಿದ್ದರ ಬಗ್ಗೆ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ . ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ.
ದೇಶಾದ್ಯಂತ ತೀವ್ರ ಗಲಭೆಗೆ ಕಾರಣದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಕೇರಳ ಮತ್ತು ಪಂಜಾಬ್ ಸರ್ಕಾರಗಳು ವಿರೋಧ ವ್ಯಕ್ತಪಡಿಸಿವೆ.