ಬೀದರ್, ಡಿ 20 : ಜಿಲ್ಲೆಯ ಬಸವಕಲ್ಯಾಣ ಪಟ್ಟಣ ಶಹಾಪುರ ಮಸೀದಿ ಮುಖ್ಯ ರಸ್ತೆಯಲ್ಲಿ ಪೊಲೀಸ್ ರು ತಮ್ಮ ಭರ್ಜರಿ ಕಾರ್ಯಾಚರಣೆ ಮೂಲಕ ಎಟಿಎಂ ದರೋಡೆಕೊರನನ್ನು ಪೊಲೀಸರು ರೆಡ್ ಹ್ಯಾಂಡ ಆಗಿ ಹಿಡಿದಿದ್ದಾರೆ.
ಸಂದೇಶ ರವಾನೆ ಆಗುತ್ತಿದ್ದಂತೆ ತಕ್ಷಣ ಎಚ್ಚೆತ್ತ ಬ್ಯಾಂಕ್ ಸಿಬ್ಬಂದಿ ನಗರ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ಬಂದ ಕೂಡಲೆ ಕಾರ್ಯಪ್ರವರ್ತರಾದ ಸಿಪಿಐ ಮಲ್ಲಿಕಾರ್ಜುನ ಯಾತನೂರ ಹಾಗೂ ಪಿಎಸ್ಐ ಸುನಿಲಕುಮಾರ ನೇತೃತ್ವದ ಪೊಲೀಸರ ತಂಡ ತಕ್ಷಣ ಸ್ಥಳಕ್ಕೆ ಧಾವಿಸಿ ಕಳ್ಳನನ್ನು ರೆಡ್ ಹ್ಯಾಂಡ್ ಆಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಬಸವಕಲ್ಯಾಣ ನಗರ ನಿವಾಸಿ ಶ್ರೀಕಾಂತ ಮಲ್ಲಿಕಾರ್ಜುನ ಸ್ವಾಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳವು ಮಾಡಲು ಯತ್ನಿಸಿದ ವ್ಯಕ್ತಿ ಮದ್ಯದ ಅಮಲಿನಲ್ಲಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಕೊಂಡಿದ್ದಾರೆ.