ಎಸೆಸೆಲ್ಸಿ ಪರೀಕ್ಷೆಗೆ ತೆರಳುತ್ತಿದ್ದ ವಿದ್ಯಾರ್ಥಿ ಕಾರು ಅಪಘಾತದಲ್ಲಿ ಸಾವು

ಎಸೆಸೆಲ್ಸಿ ಪರೀಕ್ಷೆಗೆ ತೆರಳುತ್ತಿದ್ದ ವಿದ್ಯಾರ್ಥಿ ಕಾರು ಅಪಘಾತದಲ್ಲಿ ಸಾವು

ಉತ್ತರ ಕನ್ನಡ, ಮಾ.21, ನ್ಯೂಸ್ ಎಕ್ಸ್ ಪ್ರೆಸ್: ಕಾರು ಪಲ್ಟಿಯಾದ ಪರಿಣಾಮ ಎಸೆಸೆಲ್ಸಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಅಂಕೋಲಾ ಸಮೀಪದ ಹೊಸೂರುನಲ್ಲಿ ಸಂಭವಿಸಿದೆ.

ಮೃತ ವಿದ್ಯಾರ್ಥಿಯನ್ನು ಭಟ್ಕಳ ನಿವಾಸಿ ಶಮ್ಮಾಸ್ ಗೊಲ್ಟಿ ಎಂದು ಗುರುತಿಸಲಾಗಿದೆ.

ಇಂದಿನಿಂದ ನಡೆಯುವ ಎಸೆಸೆಲ್ಸಿ ಪರೀಕ್ಷೆ ಬರೆಯಲು ಶಮ್ಮಾಸ್ ಭಟ್ಕಳದಿಂದ ಕಾರವಾರಕ್ಕೆ ಕಾರಿನಲ್ಲಿ ತನ್ನ ನಾಲ್ವರು ಸ್ನೇಹಿತರೊಂದಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಇನ್ನುಳಿದ ನಾಲ್ವರ ಪೈಕಿ ಓರ್ವ ಗಾಯಗೊಂಡಿದ್ದು, ಮೂವರು ಪಾರಾಗಿದ್ದಾರೆ ಎಂದು ಎನ್ನಲಾಗಿದೆ.

ಈ ಬಗ್ಗೆ ಅಂಕೋಲಾ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos