ಕಾರು ಮತ್ತು ಕ್ರೂಸರ್ ಡಿಕ್ಕಿ 4 ಜನ ಸಾವು

ಕಾರು ಮತ್ತು ಕ್ರೂಸರ್ ಡಿಕ್ಕಿ 4 ಜನ ಸಾವು

ಚಿತ್ರದುರ್ಗ, ಸೆ. 22 : ಕಾರು ಮತ್ತು ಕ್ರೂಸರ್ ನಡುವೆ ಡಿಕ್ಕಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹೊಸದುರ್ಗ ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ತಡರಾತ್ರಿ ಘಟನೆ ಸಂಭವಿಸಿದೆ. ಮೃತಪಟ್ಟವರನ್ನು ಮುಖೇಶ್(35), ಮದನ್ ಸಿಂಗ್ (40), ಗೌತಮ್ ಸಿಂಗ್, (38) ಲೋಕೇಶ್ ಎಂದು ಗುರುತಿಸಲಾಗಿದೆ. ಕ್ರೂಸರ್ನಲ್ಲಿದ್ದವರು ಅರಸೀಕೆರೆಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶ್ರೀರಾಂಪುರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos