ಕಾರು ಪಲ್ಟಿ : ಸ್ಥವಳದಲ್ಲೇ ಓರ್ವ ಸಾವು

ಕಾರು ಪಲ್ಟಿ : ಸ್ಥವಳದಲ್ಲೇ ಓರ್ವ ಸಾವು

ಮೈಸೂರು, ಡಿ. 20 : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬ ಗಾಯಗೊಂಡಿರುವ ಘಟನೆ ಮೈಸೂರು – ಟಿ.ನರಸೀಪುರ ರಸ್ತೆಯಲ್ಲಿ ನಡೆದಿದೆ.
ನಾಗರಾಜ್ ಭಟ್ ಸಾವನ್ನಪ್ಪಿದ ದುರ್ದೈವಿ. ಚಾಲಕ ಪ್ರಫುಲ್ ಗಾಯಗೊಂಡು ಕೆ.ಆರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರಿನಲ್ಲಿ ಮೈಸೂರಿನಿಂದ ಕೊಳ್ಳೇಗಾಲಕ್ಕೆ ನಾಗರಾಜ್ ಹಾಗೂ ಪ್ರಫುಲ್ ತೆರಳುತ್ತಿದ್ದರು. ಈ ವೇಳೆ ಮೈಸೂರು – ಟಿ.ನರಸೀಪುರ ರಸ್ತೆಯಲ್ಲಿ ಅತಿಯಾದ ವೇಗದಲ್ಲಿ ಕಾರು ಚಲಾಯಿಸಿದಕ್ಕೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.
ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಟಿ. ನರಸೀಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos