ಕಾರು ಅಡ್ಡಗಟ್ಟಿ ಪ್ರತಿಭಟನೆ

ಕಾರು ಅಡ್ಡಗಟ್ಟಿ ಪ್ರತಿಭಟನೆ

ಚಿತ್ರದುರ್ಗ, ಅ.18 : ನೆರೆ ಸಂತ್ರಸ್ತರಿಗೆ ಪರಿಹಾರ ವಿತರಣೆ ವಿಳಂಬವಾಗುತ್ತಿರುವುದನ್ನು ಖಂಡಿಸಿ ಆರೋಗ್ಯ ಸಚಿವ ಶ್ರೀರಾಮುಲು ಕಾರಿಗೆ ಅಡ್ಡಗಟ್ಟಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಕಚೇರಿ ಪ್ರವೇಶಿಸುವ ಸಚಿವ ಶ್ರೀರಾಮುಲು ಕೆಡಿಪಿ ಸಭೆಗೆ ಹಾಜರಾಗುತ್ತಿದ್ದ ಹಿನ್ನಲೆ ಪ್ರತಿಭಟನೆ ನಡೆಯಿತು. ಗೇಟ್ ನಲ್ಲಿ ಕಾರು ಅಡ್ಡಗಟ್ಟಿ ಕೆಲ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಸುಮಾರು 30 ಜನ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

ಫ್ರೆಶ್ ನ್ಯೂಸ್

Latest Posts

Featured Videos