ಏ. 3, ನ್ಯೂಸ್ ಎಕ್ಸ್ ಪ್ರೆಸ್: ಈ ಹಿಂದೆ ಚಿತ್ರರಂಗದಲ್ಲಿನ ಕಾಸ್ಟಿಂಗ್ ಕೌಚ್ ವಿಚಾರವಾಗಿ ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ಭಾರೀ ಸುದ್ದಿಯಾಗಿದ್ದ ಟಾಲಿವುಡ್ ನಟಿ ಶ್ರೀರೆಡ್ಡಿ, ಸಾಮಾಜಿಕ ಜಾಲತಾಣದಲ್ಲಿ ಬೆತ್ತಲೆ ಫೋಟೋ ಹಂಚಿಕೊಂಡಿದ್ದಾರೆ. ನೆಟ್ಟಿಗರಿಗೆ ಶಾಕ್ ನೀಡುವ ಫೋಟೋ ಪೋಸ್ಟ್ ಮಾಡಿರುವ ಶ್ರೀರೆಡ್ಡಿ, ನಾವೇನು ಲೈಂಗಿಕ ಗುಲಾಮರಲ್ಲ, ಸಿನಿಮಾ ರಂಗದಲ್ಲಿ ಕೆಲಸ ಮಾಡಲು ಬಂದಿದ್ದೇವೆ. ಅವಕಾಶಕ್ಕಾಗಿ ಯಾಕೆ ಸೆಕ್ಸ್ ಮಾಡಬೇಕು. ಇಂತಹ ಬೆಳವಣಿಗೆ ನಿಲ್ಲಿಸಬೇಕು ಎಂದು ಹೇಳಿದ್ದಾರೆ. ಅವಕಾಶ ಕೇಳಿಕೊಂಡು ಸಿನಿಮಾ ಕ್ಷೇತ್ರಕ್ಕೆ ಬರುವ ಯುವತಿಯರನ್ನು ಲೈಂಗಿಕ ಗುಲಾಮರನ್ನಾಗಿ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಶ್ರೀರೆಡ್ಡಿ ಪ್ರತಿಭಟನೆಗೆ ಬೆಂಬಲ ವ್ಯಕ್ತವಾಗಿದೆ. ಆದರೆ, ಅವರು ಪ್ರತಿಭಟನೆಗೆ ಆಯ್ದುಕೊಂಡ ಮಾರ್ಗದ ಬಗ್ಗೆ ಟೀಕೆ ವ್ಯಕ್ತವಾಗಿದೆ. ಆದರೆ, ಇದಕ್ಕೆ ತಲೆಕೆಡಿಸಿಕೊಳ್ಳದ ಶ್ರೀರೆಡ್ಡಿ, ಸಿನಿಮಾರಂಗದಲ್ಲಿ ನಟಿಯರಿಗೆ ಆಗಿರುವ ನೋವಿಗೆ ಹೋಲಿಸಿದಾಗ ಕಾಮೆಂಟ್ ಲೆಕ್ಕಕ್ಕಿಲ್ಲ. ಚಿತ್ರರಂಗದಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಪ್ರತಿಭಟಿಸಿ, ಫೋಟೋ ಬಗ್ಗೆ ಅಲ್ಲ ಎಂದು ಹೇಳಿದ್ದಾರೆ.