ಕೆ.ಆರ್.ಎಸ್. ಕಾರ್ಯಕರ್ತರ ಸಮಾವೇಶ

ಕೆ.ಆರ್.ಎಸ್. ಕಾರ್ಯಕರ್ತರ ಸಮಾವೇಶ

ಮಹದೇವಪುರ: ಬಿಬಿಎಂಪಿ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಥಾಪಿಸಿದ ರಿಪಬ್ಲಿಕ್ ಸೇನಾ ಪಾರ್ಟಿ ಯಿಂದ ರಾಜ್ಯಾದ್ಯಕ್ಷ ಜಿಗಣಿ ಶಂಕರ್ ಮಾರ್ಗದರ್ಶನದಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುತ್ತದೆ ಎಂದು ಮೂಲ ಅನುಸೂಚಿತ ಜಾತಿಗಳ ಐಕ್ಯ ತಾ ಸಮಿತಿ ರಾಜ್ಯಾದ್ಯಕ್ಷ ಬಿ.ಕೃಷ್ಣಪ್ಪ ತಿಳಿಸಿದರು.

ಕ್ಷೇತ್ರದ ಓಫಾರಂ ಸರ್ಕಲ್ ಬಳಿ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ಕೆ.ಆರ್.ಎಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣಾ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕ ರಿಪಬ್ಲಿಕ್ ಸೇನೆಯು ತಮ್ಮ ಕಾರ್ಯಕರ್ತರನ್ನು ಕಣಕ್ಕೆ ಇಳಿಸಲು ಸಜ್ಜುಗೊಳಿಸಲಾಗುತ್ತಿದೆ ಎಂದರು.

ಜಿಗಣಿ ಶಂಕರ್ ನೇತೃತ್ವದಲ್ಲಿ ಮುಂಬರುವ ಚುನಾವಣಾ ಪೂರ್ವಭಾವಿ ಸಭೆಯನ್ನು ನಡೆಸಲಾಗುವುದೆಂದರು. ಮುಂಬರುವ ಚುನಾವಣೆಯಲ್ಲಿ ಕೆ.ಆರ್.ಎಸ್ ಪಕ್ಷದಿಂದ ಎಲ್ಲಾ ವಾರ್ಡಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕಣಕ್ಕೆ ಇಳಿಸಲಾಗುವುದೆಂದರು. ಮತದಾರರು ನಮ್ಮ ಪಕ್ಷದ ಅಭ್ಯರ್ಥಿ ಗಳನ್ನು ಬೆಂಬಲಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಇದೆ ಸಮಯದಲ್ಲಿ ಕೆ.ಆರ್.ಎಸ್. ರಾಜ್ಯ ಸಂಘಟನಾ ಕಾರ್ಯದರ್ಶಿ ಬೆಳತೂರು ವೆಂಕಟೇಶ್ ಮಾತನಾಡಿ ಮಹದೇವಪುರ ವಿಧಾನ ಸಭಾ ಕ್ಷೇತ್ರದಲ್ಲಿ ಎರಡು ವಾರ್ಡ್ ಮಾತ್ರವೇ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದು ಈ ಎರಡೂ ಕ್ಷೇತ್ರಗಳಿಗೆ ಹಾಗೂ ಜನರಲ್ ಮೀಸಲಾತಿಯಿರುವ ವಾರ್ಡ್ ಗಳಿಗೂ ಸಹ ನಮ್ಮ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದೆಂದರು. ಕಳೆದ ಬಿಬಿಎಂಪಿ ಚುನಾವಣೆಯಲ್ಲಿ ಕೆ.ಆರ್.ಎಸ್ ಪಕ್ಷದಿಂದ ಅಭ್ಯರ್ಥಿಗಳು ಸ್ಪರ್ದಿಸಿದ್ದು ಉತ್ತಮ ಅನುಭವ ಹೊಂದಿದ್ದು ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಬರಲಿದೆ ಎಂದು ಅವರು ತಿಳಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos