ಬೆಂಗಳೂರಿಗೆ ಚಳಿಗಾಲ ಅಧಿವೇಶನ ಭಾಗ್ಯ

ಬೆಂಗಳೂರಿಗೆ ಚಳಿಗಾಲ ಅಧಿವೇಶನ ಭಾಗ್ಯ

ಬೆಂಗಳೂರು , ಸೆ. 19 : ಚಳಿಗಾಲದ ವಿಧಾನಮಂಡಲ ಅಧಿವೇಶನ ಈ ಬಾರಿ ಬೆಂಗಳೂರಿನಲ್ಲಿಯೇ ನಡೆಯಲಿದೆ. ಅ.14ರಿಂದ 26ರವರೆಗೂ ಅಧಿವೇಶನ ನಡೆಸಲು ವೇಳಾಪಟ್ಟಿ ಹಾಕಿಕೊಳ್ಳಲಾಗಿದೆ. ಈ ಬಾರಿ ಬೆಳಗಾವಿಯಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆ ಬೆಳಗಾವಿಯ ಬದಲು ಬೆಂಗಳೂರಿನಲ್ಲಿಯೇ ಬರುವ ಅ.14ರಿಂದ 26ವರಿಗೆ ಬೆಂಗಳೂರಿನಲ್ಲೇ ಚಳಿಗಾಲ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ.
ಅಧಿವೇಶನದಲ್ಲಿ ಬಜೆಟ್’ಗೆ ಅನುಮೋದನೆ ಪಡೆಯುವ ಜೊತೆಗೆ ಅತಿವೃಷ್ಟಿ ಹಾಗೂ ಪ್ರವಾಹದಿಂದ ಪರಿಹಾರ ಕಾರ್ಯ ಕೈಗೊಳ್ಳಬೇಕಾಗಿರುವುದರಿಂದ ಪೂರಕ ಬಜೆಟ್ ಮಂಡಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿಯವರು ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos