ಚಾಮರಾಜನಗರ, ಮಾ, 26, ನ್ಯೂಸ್ ಎಕ್ಸ್ ಪ್ರೆಸ್: ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರಕ್ಕೆ ಬಿಎಸ್ಪಿ ಅಭ್ಯರ್ಥಿಯಾಗಿ ಡಾ. ಶಿವಕುಮಾರ್ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.
ಇದಕ್ಕೂ ಮುನ್ನ ಶಿವಕುಮಾರ್ ಅವರು ನಗರದ ಸಾರಾನಾಥ ಬೌದ್ದ ವಿಹಾರಕ್ಕೆ ಭೇಟಿ ನೀಡಿದರು. ಬಳಿಕ ರಾಮಸಮುದ್ರ ಬಡಾವಣೆಯ ಬಳಿಯ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಅಲ್ಲಿಂದ ನೇರವಾಗಿ ಚಾಮರಾಜೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಜಿಲ್ಲಾಡಳಿತಕ್ಕೆ ತಲುಪಿ, ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖ್ಯಸ್ಥ ಎನ್.ಮಹೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅರಕಲವಾಡಿನಾಗೇಂದ್ರ, ಮಾದೇಶ್ ಉಪ್ಪಾರ್, ಸಮೀವುಲ್ಲಾ ಮತ್ತಿತರರು ಸಾಥ್ ನೀಡಿದರು.