ರಾಜ್ಯದಲ್ಲಿ ಅತ್ಯುತ್ತಮ ಸಂಸದ ಎಂದರೆ ಡಿಕೆ ಸುರೇಶ್: ಮುಖ್ಯಮಂತ್ರಿ ಚಂದ್ರು

ರಾಜ್ಯದಲ್ಲಿ ಅತ್ಯುತ್ತಮ ಸಂಸದ ಎಂದರೆ ಡಿಕೆ ಸುರೇಶ್: ಮುಖ್ಯಮಂತ್ರಿ ಚಂದ್ರು

ರಾಮನಗರ: ರಾಜ್ಯದಲ್ಲಿ ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ರಾಜ್ಯದಲ್ಲೇ ಅಭ್ಯರ್ಥಿಗಳ ಪರ ನಾಯಕರು ಭರ್ಜರಿ ಮತ ಯಾಚಿಸುತ್ತಿದ್ದಾರೆ. ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜಿದಾಜಿದ್ದಿಗೆ ಕಾರಣವಾಗಿದೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಪರವಾಗಿ ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅವರು ಪ್ರಚಾರ ಮಾಡಿದರು. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಪಟ್ಟಣದಲ್ಲಿ ತೆರೆದ ವಾಹನದಲ್ಲಿ ಡಿ.ಕೆ. ಸುರೇಶ್ ಜೊತೆಗೆ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಚಂದ್ರು, ಡಿ.ಕೆ. ಸುರೇಶ್ ರಾಜ್ಯದ ಅತ್ಯುತ್ತಮ ಸಂಸದರಾಗಿದ್ದು, ಅವರಿಗೆ ಈ ಬಾರಿ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಇದು ಪಾಂಡವರು ಮತ್ತು ಕೌರವರು ನಡುವಿನ ಯುದ್ಧವಾಗಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಜನಪರ ಯೋಜನೆಗಳನ್ನು ಮಾಡಿದ್ದಾರೆ, ಕೇಂದ್ರ ಸರ್ಕಾರ ಜನರ ಹಣವನ್ನು ಕೊಳ್ಳೆ ಹೊಡೆಯುತ್ತಿದೆ. ಕಳೆದ ಚುನಾವಣೆಯಲ್ಲಿ ಅವರು ಮಾಡಿದ ಯಾವ ಘೋಷಣೆಗಳನ್ನು ಕೂಡ ಈಡೇರಿಸಿಲ್ಲ ಎಂದರು.

ರಾಜ್ಯದ 28 ಸಂಸದರಲ್ಲಿ ಯಾರಾದರೂ ಗಂಡಸರು ಅಂತ ಇದ್ದರೆ ಅದು ಡಿ.ಕೆ. ಸುರೇಶ್ ಮಾತ್ರ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಧೈರ್ಯವಾಗಿ ಪ್ರಶ್ನಿಸಿದ್ದರೆ. ಉಳಿದ 27 ಸಂಸದರು ಗುಲಾಮಗಿರಿಯಲ್ಲಿ ಬಿದ್ದಿದ್ದಾರೆ ಎಂದರು ಹೇಳಿದರು. ರಾಜ್ಯದ ಹಿತಾಸಕ್ತಿ ಕಾಪಾಡಲು ಡಿ.ಕೆ. ಸುರೇಶ್ ಅವರನ್ನು ಆಯ್ಕೆ ಮಾಡಿ ಸಂಸತ್ತಿಗೆ ಕಳುಹಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದರು. ರಾಮನಗರ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಬೈರೇಗೌಡ ಸೇರಿದಂತೆ ಎಲ್ಲ ಜಿಲ್ಲಾ ಪದಾಧಿಕಾರಿಗಳು ಮುಖಂಡರುಗಳು ಕಾರ್ಯಕರ್ತರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

 

 

ಫ್ರೆಶ್ ನ್ಯೂಸ್

Latest Posts

Featured Videos