ಚೆನ್ನೈಗೂ ತಟ್ಟಿದ ಪೌರತ್ವ ಬಿಸಿ

ಚೆನ್ನೈಗೂ ತಟ್ಟಿದ ಪೌರತ್ವ ಬಿಸಿ

ಚೆನ್ನೈ,ಡಿ. 23 : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಡಿಎಂಕೆ ನೇತೃತ್ವದಲ್ಲಿ ಇಂದು ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಿತು. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಚೆನ್ನೈನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಡಿಎಂಕೆ ಕಾರ್ಯಾಧ್ಯಕ್ಷ ಮತ್ತು ವಿಧಾನಸಭೆಯ ವಿರೋಧ ಪಕ್ಷದ ಎಂ.ಕೆ.ಸ್ಟಾಲಿನ್, ಕೇಂದ್ರದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ, ಎಂಡಿಎಂಕೆ ಮುಖ್ಯಸ್ಥ ಮೈಕೋ ಹಾಗೂ ಎಡಪಕ್ಷಗಳ ಮುಖಂಡರು ಮತ್ತು ಅಸಂಖ್ಯಾತ ಕಾರ್ಯಕರ್ತರು ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು. ನಗರದ ಎಗ್ಮೋರ್ನಿಂದ 2 ಕಿ.ಮೀ ದೂರವಿರುವ ರಾಜರತ್ನಂ ಕ್ರೀಡಾಂಗಣದವರೆಗೂ ನಡೆದ ಪ್ರತಿಭಟನಾ ರ್ಯಾಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಬ್ಯಾನರ್ಗಳನ್ನು ಕಾರ್ಯಕರ್ತರು ಪ್ರದರ್ಶಿಸುತ್ತ ಮೆರವಣಿಗೆಯಲ್ಲಿ ಸಾಗಿದರು.

ಫ್ರೆಶ್ ನ್ಯೂಸ್

Latest Posts

Featured Videos