ಚಿದುಗೆ ಷರತ್ತು ಬದ್ಧ ಜಾಮೀನು

ಚಿದುಗೆ ಷರತ್ತು ಬದ್ಧ ಜಾಮೀನು

ನವ ದೆಹಲಿ, ಅ.22 : ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳಿಂದ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂರಂ ಅವರಿಗೆ ಸುಪ್ರೀಂ ಕೋರ್ಟ್ ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಇಡಿ ಕಸ್ಟಡಿ ಮುಂದುವರೆಯಲಿದೆ.
ಒಂದು ಲಕ್ಷ ರೂ. ಮೌಲ್ಯದ ಬಾಂಡ್ ಹಾಗೂ ಪಾಸ್ಪೋರ್ಟ್ ಅನ್ನು ಕೋರ್ಟ್ಗೆ ಸಲ್ಲಿಸಬೇಕು ಹಾಗೂ ನ್ಯಾಯಾಲಯದ ಅನುಮತಿ ಇಲ್ಲದೆ ವಿದೇಶ ಪ್ರಯಾಣ ಮಾಡಬಾರದು ಎಂದು ತಾಕೀತು ಮಾಡಇರುವ ಸುಪ್ರೀಂ ಕೋರ್ಟ್ ಮಾಜಿ ಸಚಿವ ಪಿ. ಚಿದಂಬರಂ ಅವರಿಗೆ ಜಾಮೀನು ಮಂಜೂರು ಮಾಡಿದೆ. ಪಿ. ಚಿದಂಬರಂ ಹಣಕಾಸು ಸಚಿವರಾಗಿದ್ದ ಅವಧಿಯಲ್ಲಿ 2007 ರಲ್ಲಿ 305 ಕೋಟಿ ರೂ. ವಿದೇಶಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದರು ಎಂದು ಆರೋಪಿಸಿ ಸಿಬಿಐ ಅವರ ವಿರುದ್ಧ 2017 ಮೇ 15 ರಂದು ಎಫ್ಐಆರ್ ದಾಖಲು ಮಾಡಿತ್ತು.

ಫ್ರೆಶ್ ನ್ಯೂಸ್

Latest Posts

Featured Videos