ಬೆಳಗಾವಿ, ಏ. 17, ನ್ಯೂಸ್ ಎಕ್ಸ್ ಪ್ರೆಸ್: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಸುರೇಶ ಅಂಗಡಿ ಹಾಗೂ ಕಾಂಗ್ರೆಸ್, ಜೆಡಿಎಸ್ನ ಮೈತ್ರಿ ಅಭ್ಯರ್ಥಿ ಡಾ. ವಿ.ಎಸ್.ಸಾಧುನವರ ನಡುವೆ ತೀವ್ರ ಪೈಪೋಟಿ ಜೋರಾಗಿ ನಡೆಯುತ್ತಿದೆ.
ಇದರ ನಡುವೆ ಚಿಕ್ಕೋಡಿಗೆ ನಾಳೆ ಮಧ್ಯಾಹ್ನ 2.45 ಕ್ಕೆ ಬಿ.ಕೆ.ಕಾಲೇಜು ಆವರಣದ ಮೈದಾನದಲ್ಲಿ ಬೃಹತ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. 1 ವರ್ಷದಲ್ಲಿ 2ನೇ ಬಾರಿಗೆ ಚಿಕ್ಕೋಡಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಅಬ್ಬರದ ಪ್ರಚಾರ ಕಾರ್ಯಕ್ಕೆ ಚಿಕ್ಕೋಡಿ ಸಜ್ಜಾಗಿದೆ.
ಚಿಕ್ಕೋಡಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಬ್ ಜೊಲ್ಲೆ, ಬೆಳಗಾವಿ ಬಿಜೆಪಿ ಅಭ್ಯರ್ಥಿ ಸುರೇಶ್ ಅಂಗಡಿ ಪರ ಮೋದಿ ಮತ ಬೇಟೆ ಮಾಡಲಿದ್ದಾರೆ.