ಚಿಂಚೋಳಿ, ಕುಂದಗೋಳ ಉಪಚುನಾವಣೆ: ಕಣ ರಂಗೇರಿದೆ

ಚಿಂಚೋಳಿ, ಕುಂದಗೋಳ ಉಪಚುನಾವಣೆ: ಕಣ ರಂಗೇರಿದೆ

 ಚಿಂಚೋಳಿ, ಏ. 30, ನ್ಯೂಸ್ ಎಕ್ಸ್ ಪ್ರೆಸ್:  ಚಿಂಚೋಳಿ ಮತ್ತು ಕುಂದಗೋಳ ಕ್ಷೇತ್ರದ ಚುನಾವಣಾ ಕಣ ರಂಗೇರಿದೆ. ಮೈತ್ರಿ ಸರ್ಕಾರ ಮತ್ತು ಪ್ರತಿಪಕ್ಷ ಬಿಜೆಪಿಗೆ ಚುನಾವಣೆ ಮುಖ್ಯವಾಗಿದೆ. ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಪ್ರತಿಷ್ಠೆಯೂ ಇದರಲ್ಲಿ ಅಡಗಿದೆ.

ಧಾರವಾಡ ಜಿಲ್ಲೆಯ ಕುಂದಗೋಳ, ಕುಲಬುರಗಿ ಜಿಲ್ಲೆಯ ಚಿಂಚೋಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದರು. ಆದ್ದರಿಂದ, ಕ್ಷೇತ್ರವನ್ನುಉಳಿಸಿಕೊಳ್ಳುವ ಅನಿವಾರ್ಯತೆ ಪಕ್ಷಕ್ಕಿದೆ. ಬಿಜೆಪಿ ಉಪ ಚುನಾವಣೆ ಗೆಲ್ಲಲೇಬೇಕು ಎಂದು ಪಣ ತೊಟ್ಟಿದೆ.

ಕುಂದಗೋಳ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರ ಪ್ರತಿಷ್ಠೆ ಅಡಗಿದೆ. ಚಿಂಚೋಳಿ ಕ್ಷೇತ್ರದಲ್ಲಿ ತಮ್ಮ ಕುಟುಂಬದ ವಿರುದ್ಧ ತೊಡೆ ತಟ್ಟಿರುವ ಡಾ.ಉಮೇಶ್ ಜಾಧವ್ ಅವರಿಗೆ ಮುಖಭಂಗ ಉಂಟು ಮಾಡಲು ಮಲ್ಲಿಕಾರ್ಜುನ ಖರ್ಗೆ ತಂತ್ರ ರೂಪಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos