ಚಿತ್ರದುರ್ಗ, ಆ.20 : ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಸಿಗದೇ ಇರುವುದಕ್ಕೆ ಚಿತ್ರದುರ್ಗ ವಿಧಾನಸಭೆ ಶಾಸಕ ತಿಪ್ಪಾರೆಡ್ಡಿ ಬೇಸರ ವ್ಯಕ್ತ ಪಡಿಸಿದ್ದಾರೆ.
ಮಂಗಳವಾರ ಬಿಜೆಪಿ ಸಂಪುಟದಲ್ಲಿ ಸಚಿವ ಸ್ಥಾನ ಕೈ ತಪ್ಪಿರುವ ಹಿನ್ನಲೆ ಬೇಸರ ವ್ಯಕ್ತ ಪಡಿಸಿ, ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಒಟ್ಟು 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಆದರೆ ಹಿರಿಯ, ನಿಷ್ಠವಂತ ಬಿಜೆಪಿ ಪಕ್ಷ ಶಾಸಕರಾಗಿ ಜನ ಸೇವೆ ಮಾಡುತ್ತಾ ಬಂದಿದ್ದೇನೆ. ಆದರೂ, ಸಚಿವ ಸ್ಥಾನ ಕೈ ತಪ್ಪಿದೆ ಎಂದರು. ಈಗಾಗಲೇ ಶಾಸಕರೊಂದಿಗೆ ದೂರವಾಣಿ ಮೂಲಕ ಮಾತನಾಡಿಕೊಂಡು ಬೆಂಗಳೂರಿನಲ್ಲಿ ಸಭೆ ಸೇರಿ ಚರ್ಚಿಸುತ್ತೇವೆ. ನಂತರ ಹೈ ಕಮಾಂಡಗೆ ಮನವಿ ಮಾಡುವುದಾಗಿ ಹೇಳಿದರು.