ಚಿತ್ರದುರ್ಗ ಜಿಲ್ಲಾ ಜೆಡಿಎಸ್ ನಲ್ಲಿ ಭಿನ್ನಮತ ಸ್ಫೋಟ; ಕಾರ್ಯಕರ್ತರ ಪ್ರತಿಭಟನೆ

ಚಿತ್ರದುರ್ಗ ಜಿಲ್ಲಾ ಜೆಡಿಎಸ್ ನಲ್ಲಿ ಭಿನ್ನಮತ ಸ್ಫೋಟ; ಕಾರ್ಯಕರ್ತರ ಪ್ರತಿಭಟನೆ

ಚಿತ್ರದುರ್ಗ, ಮಾ.8, ನ್ಯೂಸ್ ಎಕ್ಸ್ ಪ್ರೆಸ್: ಜೆಡಿಎಸ್ ಜಿಲ್ಲಾ ಘಟಕದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ನೂತನ ಕಚೇರಿ ಉದ್ಘಾಟನೆ ಸಂದರ್ಭದಲ್ಲಿ ಕೆಲ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಇಂದು ಜಿಲ್ಲಾ ಘಟಕದ ಅಧ್ಯಕ್ಷ ಯಶೋಧರ ಅವರಿಗೆ ಮುತ್ತಿಗೆ ಹಾಕಿ ಅಸಮಾಧಾನ ವ್ಯಕ್ತಪಡಿಸಿದರು.

ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಅನೇಕರು ಕ್ಷೇತ್ರದ ಕಡೆ ಗಮನ ಹರಿಸಿಲ್ಲ. ನಾಯಕರು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

ಜೆಡಿಎಸ್ ಮುಖಂಡ ಕಾಂತರಾಜು ಹಾಗೂ ಯಶೋಧರ ಬೆಂಬಲಿಗರ ನಡುವೆ ವಾಗ್ವಾದ ನಡೆಯಿತು. ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡುವ ವಿಚಾರದಲ್ಲಿ ಕೆಲವರು ಅಸಮಾಧಾನ ಹೊರಹಾಕಿದರು.

ಫ್ರೆಶ್ ನ್ಯೂಸ್

Latest Posts

Featured Videos