ಚಿತ್ರದುರ್ಗ, ಏ. 5, ನ್ಯೂಸ್ ಎಕ್ಸ್ ಪ್ರೆಸ್: ಚಿತ್ರದುರ್ಗ, ಮೈಸೂರಿನಲ್ಲಿ ಆಯೋಜನೆಗೊಂಡಿದ್ದ ಪ್ರಧಾನಿ ಮೋದಿಯವರ ಚುನಾವಣಾ ರ್ಯಾಲಿಯನ್ನ 1 ದಿನ ಮುಂದೂಡಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ತಿಳಿಸಿದ್ದಾರೆ.
ಏ. 8ರಂದು ರ್ಯಾಲಿ ನಿಗದಿಯಾಗಿತ್ತು. ಆದರೆ, ಏ. 9ಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಸದ್ಯ ಕಾರ್ಯಕ್ರಮ 1 ದಿನ ಮುಂದೂಡಲು ನಿಖರ ಕಾರಣ ಏನು ಎಂಬುದರ ಬಗ್ಗೆ ಮಾಹಿತಿ ಇಲ್ಲವೆಂದು ತಿಳಿಸಿದರು. ಏ. 9ರ ಕಾರ್ಯಕ್ರಮದಲ್ಲಿ ತುಮಕೂರು, ದಾವಣಗೆರೆ, ಚಿತ್ರದುರ್ಗ ಕ್ಷೇತ್ರಗಳ ಕಾರ್ಯಕರ್ತರು ರ್ಯಾಲಿಯಲ್ಲಿ ಭಾಗಿಯಾಗಲಿದ್ದಾರೆ.