ಮೈಸೂರು, ಸೆ. 21 : ಕ್ಷುಲ್ಲಕ ಕಾರಣಕ್ಕೆ ಯುವಕರು ವೃದ್ಧರೊಬ್ಬರ ತಲೆ ಕಡಿದು ತಂದಿರುವ ಘಟನೆ ಬನ್ನೂರಿನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕು ಚಾಮನಹಳ್ಳಿ ಗ್ರಾಮದ ಕೆಂಪೇಗೌಡ (65) ಕೊಲೆಯಾದ ವೃದ್ಧ. ಕೆಂಪೇಗೌಡ ಮಲಗಿದ್ದ ಸ್ಥಳಕ್ಕೆ ಚೇತನ್, ಮಧು ಎಂಬವರು ಆಗಮಿಸಿದ ವೃದ್ಧನ ತಲೆಯನ್ನೇ ತುಂಡರಿಸಿದ್ದಾರೆ. ಬಳಿಕ ರುಂಡವನ್ನು ಹಿಡಿದುಕೊಂಡು ಬನ್ನೂರು ಪೊಲೀಸ್ ಠಾಣೆಗೆ ಬಂದಿದ್ದಾರೆ. ಸದ್ಯ ಪೊಲೀಸರು ಪ್ರಕರಣ ಸಂಬಂಧ ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ.