ಒಡಿಶಾ, ಏ. 18, ನ್ಯೂಸ್ ಎಕ್ಸ್ ಪ್ರೆಸ್: ಕರ್ತವ್ಯ ನಿರತ ಚುನಾವಣಾ ಅಧಿಕಾರಿಯೊಬ್ಬರನ್ನ, ನಕ್ಸಲರು ಗುಂಡಿಟ್ಟು ಕೊಂದಿರುವ ಘಟನೆ ಕಂದಮಾಲ್ ಜಿಲ್ಲೆಯ ಗೋಚಪಡ ಪೊಲೀಸ್ ಠಾಣಾ ವ್ಯಾಪ್ತಿಯ ಬರ್ಲಿ ಗ್ರಾಮದಲ್ಲಿ ನಡೆದಿದೆ. ಸಂಜುಕ್ತಾ ದಿಗಾಲ್ ಹತ್ಯೆಗೀಡಾದ ಚುನಾವಣಾಧಿಕಾರಿ.
ಒಡಿಶಾದಲ್ಲಿ ಎರಡನೇ ಹಂತದ ಚುನಾವಣೆ ನಡೆಯುತ್ತಿದ್ದು, ಇಂದು ಬೆಳಗ್ಗಿನ ಜಾವ ಸಂಜುಕ್ತಾ ತಮ್ಮ ಮನೆಯಿಂದ ಮತಗಟ್ಟೆಗೆ ತೆರಳುತ್ತಿದ್ದರು. ಈ ವೇಳೆ ಏಕಾಏಕಿ ಚುನಾವಣಾಧಿಕಾರಿ ತೆರಳುತ್ತಿದ್ದ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಸಂಜುಕ್ತಾ ಮೃತಪಟ್ಟಿದ್ದು, ಸಹೋದ್ಯೋಗಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ, ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.