ಚುನಾವಣಾ ಕಣದಿಂದ ಹಿಂದೆ ಸರಿದ ನಾಯಕ

ಚುನಾವಣಾ ಕಣದಿಂದ ಹಿಂದೆ ಸರಿದ ನಾಯಕ

ರಾಯಚೂರು, ಏ. 8, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ  ಬೆನ್ನಲ್ಲೇ ಅಭ್ಯರ್ಥಿಯೋರ್ವರು ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ರಾಯಚೂರಿನಿಂದ  ಸ್ಪರ್ಧೆ ಮಾಡಿದ್ದ ಪಕ್ಷೇತರ ಅಭ್ಯರ್ಥಿ  ರಂಗಪ್ಪ ನಾಯಕ್ ನಾಮಪತ್ರ ವಾಪಸ್ ಪಡೆದಿದ್ದಾರೆ.

ರಾಯಚೂರಿನಲ್ಲಿ ಏ. 23ಕ್ಕೆ ಚುನಾವಣೆ ನಡೆಯಲಿದ್ದು,  ಏ. 4 ರಂದು ನಾಮಪತ್ರ ಸಲ್ಲಿಸಿದ್ದರು. ಇದೀಗ ಮಾಜಿ ಸಂಸದ ರಾಜಾ ರಂಗಪ್ಪ ನಾಯಕ್ ನಾಮಪತ್ರ ವಾಪಸ್ ಪಡೆದಿದ್ದಾರೆ.

ಮೈತ್ರಿ ಅಭ್ಯರ್ಥಿ ಬಿ.ವಿ. ನಾಯಕ್  ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ  ರಾಜಾ ರಂಗಪ್ಪ ನಾಯಕ್ ಕಣಕ್ಕೆ ಇಳಿದಿದ್ದರು.  ಸಂಸದೀಯ ನಾಯಕ ಮಲ್ಲಿಕಾರ್ಜು ಖರ್ಗೆ, ಸಚಿವ ಸತೀಶ್ ಜಾರಕಿಹೊಳಿ ಮನವೊಲಿಕೆ ಹಿನ್ನೆಲೆ ನಾಮಪತ್ರ ವಾಪಸ್ ಪಡೆದಿದ್ದಾರೆ ಎನ್ನಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos