ಚುನಾವಣೆಯ ವೇಳೆಯಲ್ಲೇ ‘ದೋಸ್ತಿ’ಗೆ ಬಿಗ್ ಶಾಕ್.!

ಚುನಾವಣೆಯ ವೇಳೆಯಲ್ಲೇ ‘ದೋಸ್ತಿ’ಗೆ ಬಿಗ್ ಶಾಕ್.!

ಶಿವಮೊಗ್ಗ, . 8, ನ್ಯೂಸ್ ಎಕ್ಸ್ ಪ್ರೆಸ್: ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟಕ್ಕೆ ಆಘಾತ ಎದುರಾಗಿದೆ.

ಇತ್ತೀಚೆಗಷ್ಟೇ ಜೆಡಿಎಸ್ ತೊರೆದಿದ್ದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಪ್ರಭಾವಿ ಮುಖಂಡ ಆರ್. ಮದನ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಹಿರಿಯ ಸಮಾಜವಾದಿ ಶಾಂತವೇರಿ ಗೋಪಾಲಗೌಡರ ಮೊಮ್ಮಗನಾಗಿರುವ ಆರ್. ಮದನ್ 2009ರ ವಿಧಾನಸಭೆ ಚುನಾವಣೆಯಲ್ಲಿ ತೀರ್ಥಹಳ್ಳಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸುಮಾರು 22,000 ಮತಗಳನ್ನು ಪಡೆದಿದ್ದರು. ಜೆಡಿಎಸ್ ಪಕ್ಷವನ್ನು ಪ್ರಬಲವಾಗಿ ಸಂಘಟಿಸಿದ್ದರು.

ಆದರೆ, ಇತ್ತೀಚಿನ ಬೆಳವಣಿಗೆಗಳಿಂದ ಬೇಸತ್ತ ಅವರು, ಜೆಡಿಎಸ್ ಪಕ್ಷವನ್ನು ತೊರೆದಿದ್ದರು. ಅವರು ಬಿಜೆಪಿಗೆ ಸೇರ್ಪಡೆಯಾಗಿ ಪ್ರಾಥಮಿಕ ಸದಸ್ಯತ್ವ ಪಡೆದುಕೊಂಡಿದ್ದಾರೆ. ಇದರಿಂದಾಗಿ ತೀರ್ಥಹಳ್ಳಿ ಭಾಗದಲ್ಲಿ ಬಿಜೆಪಿಗೆ ಹೆಚ್ಚಿನ ಅನುಕೂಲವಾಗಲಿದೆ.

 

ಫ್ರೆಶ್ ನ್ಯೂಸ್

Latest Posts

Featured Videos