ಜನವರಿಯಲ್ಲಿ  ಪೌರತ್ವ ಕಾಯ್ದೆ ಜಾರಿ

ಜನವರಿಯಲ್ಲಿ  ಪೌರತ್ವ ಕಾಯ್ದೆ ಜಾರಿ

ಬೆಂಗಳೂರು, ಡಿ. 19: ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನ ಖಚಿತ ಎಂಬ ಸಂದೇಶವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವಾನಿಸಿದ್ದಾರೆ. ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯಿದೆ ಜಾರಿ ಮಾಡುವುದು ನಿಶ್ಚಿತ. ಈ ಕುರಿತ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡು ಕೇಂದ್ರದಿಂದ ಆದೇಶ ಬಂದರೆ ಜನವರಿಯಿಂದಲೇ ಪೌರತ್ವ ಕಾಯಿದೆ ಜಾರಿ ಮಾಡಲು ಕ್ರಮ ಕೈಗೊಳ್ಳುತ್ತೇವೆ. ದೇಶಕ್ಕೆ ಮಾದರಿಯಾಗಿ ಈ ಕಾಯ್ದೆ ಅನುಷ್ಠಾನಗೊಳಿಸುತ್ತೇವೆ ಎಂದು ಬಿಎಸ್ವೈ ಸ್ಪಷ್ಟಪಡಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯಿದೆ ಅನುಷ್ಠಾನಕ್ಕೆ ಪಂಜಾಬ್, ಪಶ್ಚಿಮ ಬಂಗಾಳ, ಕೇರಳ ಸೇರಿ ಕಾಂಗ್ರೆಸ್, ಎಡಪಕ್ಷಗಳು ಹಾಗೂ ತೃಣಮೂಲ ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಇದರ ಬೆನ್ನಲ್ಲೇ ರಾಜ್ಯದಲ್ಲಿ ಜನವರಿಯಿಂದಲೇ ಪೌರತ್ವ ಕಾಯಿದೆ ಅನುಷ್ಠಾನಗೊಳಿಸುವುದಾಗಿ ಯಡಿಯೂರಪ್ಪ ನೀಡಿರುವ ಹೇಳಿಕೆ ತೀವ್ರ ಮಹತ್ವ ಪಡೆದುಕೊಂಡಿದೆ.

 

ಫ್ರೆಶ್ ನ್ಯೂಸ್

Latest Posts

Featured Videos