ಭಗೀರಥ ಜಯಂತ್ಯುತ್ಸವ ಸಮಾವೇಶದಲ್ಲಿ ಸಿಎಂ ಭಾಗಿ

ಭಗೀರಥ ಜಯಂತ್ಯುತ್ಸವ ಸಮಾವೇಶದಲ್ಲಿ ಸಿಎಂ ಭಾಗಿ

ಚಿತ್ರದುರ್ಗ: ಇಂದು ಸಿಎಂ ಸಿದ್ದರಾಮಯ್ಯನವರು ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಿಗ್ಗೆ 10.30 ಕ್ಕೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣದ ಮೂಲಕ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಬ್ರಹ್ಮ ವಿದ್ಯಾನಗರಕ್ಕೆ ತೆರಳಲಿರುವ ಸಿಎಂ ಸಿದ್ದರಾಮಯ್ಯ.

ಸುಕ್ಷೇತ್ರ ಬ್ರಹ್ಮವಿದ್ಯಾನಗರದಲ್ಲಿ ಆಯೋಜಿಸಿರುವ ಜಗದ್ಗುರು ಶ್ರೀ ಡಾ. ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳ 25ನೇ ವರ್ಷದ ಪಟ್ಟಾಭಿಷೇಕದ ರಜತ ಮಹೋತ್ಸವ ಮತ್ತು ಭಗೀರಥ ಜಯಂತ್ಯುತ್ಸವ ಹಾಗೂ ಉಪ್ಪಾರರ ಬೃಹತ್‌ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಇಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಪ್ರಸಿದ್ಧ ವಾಲ್ಮೀಕಿ ಜಾತ್ರೆ ನಡೆಯಲಿದ್ದು ಎಂದು ಸಿಎಂ ಸಿದ್ದರಾಮಯ್ಯನವರು ಭಾಗಿಯಾಗಲಿದ್ದಾರೆ. ಮಧ್ಯಾಹ್ನ 1:25ಕ್ಕೆ ಹರಿಹರ ತಾಲೂಕಿನ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಆವರಣದಲ್ಲಿರುವ ಹೆಲಿಪ್ಯಾಡ್ ಗೆ ಆಗಮಿಸುವವರು ನಂತರ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ರಾಜನಹಳ್ಳಿ ವತಿಯಿಂದ ಆಯೋಜಿಸಿರುವ ಮಹರ್ಷಿ ವಾಲ್ಮೀಕಿ ಜನ ಜಾಗೃತಿ ಜಾತ್ರಾ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರು ಭಾಗವಹಿಸಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos