ನೇಹಾ ಹತ್ಯೆ ಪ್ರಕರಣ ಆರೋಪಿಗೆ ಕಠಿಣ ಶಿಕ್ಷೆ: ಸಿಎಂ

ನೇಹಾ ಹತ್ಯೆ ಪ್ರಕರಣ ಆರೋಪಿಗೆ ಕಠಿಣ ಶಿಕ್ಷೆ: ಸಿಎಂ

ಬೆಂಗಳೂರು: ನೇಹಾ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ, ಪ್ರೀತಿಸಲು‌ ನಿರಾಕರಿಸಿದಳು ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್, ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನೇಹಾಳನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಕಠಿಣ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೀದರ್ ನಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ಸಿಎಂ ಸಿದ್ದರಾಮಯ್ಯ, ನೇಹಾ ಹತ್ಯೆ ಪ್ರಕರಣವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆಯನ್ನು ಈಗಾಗಲೇ ಸಿಐಡಿಗೆ ನಿಡಲಾಗಿದೆ ಎಂದರು.

ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಲಾಗಿದೆ.. ಈಗ ಬಿಜೆಪಿ ನಾಯಕರು ಸಿಬಿಐ ಗೆ ಕೊಡಬೇಕು ಎಂದು ಹೇಳುತ್ತಿದ್ದಾರೆ. ಇವರ ಸರ್ಕಾರದ ಅವಧಿಯಲ್ಲಿ ಯಾವುದೇ ಕೇಸನ್ನು ಸಿಬಿಐಗೆ ವಹಿಸಿದ್ದರಾ? ವಿದ್ಯಾರ್ಥಿನಿ ಹತ್ಯೆ ಪ್ರಕರಣದಲ್ಲಿ ಅನಗತ್ಯ ರಾಜಕೀಯ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.

ಫ್ರೆಶ್ ನ್ಯೂಸ್

Latest Posts

Featured Videos