ಸಿಎಂಗೆ ಬಹುಮತ ಇಲ್ಲ, ನಾಳೆ ರಾಜೀನಾಮೆ ಕೊಡಲೇಬೇಕು

ಸಿಎಂಗೆ ಬಹುಮತ ಇಲ್ಲ, ನಾಳೆ ರಾಜೀನಾಮೆ ಕೊಡಲೇಬೇಕು

ಬೆಂಗಳೂರು, ಜು. 17 : ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ಬಂಡಾಯ ಶಾಸಕರ ರಾಜೀನಾಮೆ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ಮಧ್ಯಂತರ ಆದೇಶ ಸಂವಿಧಾನದ ಮತ್ತು ಪ್ರಜಾಪ್ರಭುತ್ವದ ಗೆಲುವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

15 ಶಾಸಕರ ರಾಜೀನಾಮೆ ಅರ್ಜಿ ಕುರಿತ ಆದೇಶವನ್ನು ಸುಪ್ರೀಂಕೋರ್ಟ್ ಇಂದು ಪ್ರಕಟಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಕರ್ನಾಟಕ ಮುಖ್ಯಮಂತ್ರಿ ಕುಮಾರಸ್ವಾಮಿ ಬಹುಮತ ಕಳೆದುಕೊಂಡಿದ್ದಾರೆ. ಯಾವಾಗ ಸರ್ಕಾರಕ್ಕೆ ಬಹುಮತ ಇಲ್ಲವೋ ಆಗ ಕುಮಾರಸ್ವಾಮಿ ರಾಜೀನಾಮೆ ಕೊಡಲೇಬೇಕಾಗಿದೆ. ನಾನು ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸುವುದಾಗಿ ಹೇಳಿದರು.

ನಾಳೆ ನಡೆಯುವ ವಿಶ್ವಾಸಮತ ಯಾಚನೆ ವೇಳೆ ಕುಮಾರಸ್ವಾಮಿ ರಾಜೀನಾಮೆ ನೀಡಲೇಬೇಕಾಗಿದೆ. ಸರ್ಕಾರ ರಚನೆಗೆ ಬೇಕಾದ ಶಾಸಕರ ಸಂಖ್ಯೆ ಮೈತ್ರಿ ಸರ್ಕಾರದಲ್ಲಿ ಇಲ್ಲ ಎಂದು ಹೇಳಿದರು.

 

ಫ್ರೆಶ್ ನ್ಯೂಸ್

Latest Posts

Featured Videos