ಸಿಎಂ ಖಾತೆಗೆ 137 ಕೋಟಿ ರೂ. ಜಮಾ

ಸಿಎಂ ಖಾತೆಗೆ 137 ಕೋಟಿ ರೂ. ಜಮಾ

ಬೆಂಗಳೂರು, ಸೆ. 20 : ಪ್ರಕೃತಿ ವಿಕೋಪ ಪರಿಹಾರ ಸಿಎಂ ನಿಧಿ ಖಾತೆಗೆ 137.32 ಕೋಟಿ ರೂ. ದೇಣಿಗೆ ಜಮಾ ಆಗಿದೆ. ರಾಜ್ಯದ ಪ್ರವಾಹ ಪರಿಸ್ಥಿತಿಗೆ ಸ್ಪಂದಿಸಿ ನಿಧಿಗೆ ಸ್ವಯಂ ಸ್ಫೂರ್ತಿಯಿಂದ ವಿವಿಧ ಸಂಘ, ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಸರ್ಕಾರಿ ನೌಕರರು, ವಿವಿಧ ನಿಗಮ-ಮಂಡಳಿಗಳ ನೌಕರರು ದೇಣಿಗೆ ನೀಡಿದ್ದಾರೆ.
ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ 25 ಕೋಟಿ ರೂ., ಇನ್ಫೋಸಿಸ್ ಪ್ರತಿಷ್ಠಾನದ ವತಿಯಿಂದ ಅಧ್ಯಕ್ಷೆ ಸುಧಾ ಮೂರ್ತಿ ಅವರು 10 ಕೋಟಿ ರೂ. ದೇಣಿಗೆ ನೀಡಿ ಇತರರಿಗೆ ಸ್ಫೂರ್ತಿಯಾಗಿದ್ದಾರೆ. ಅಂತೆಯೇ ಎನ್ಎಂಡಿಸಿ 10 ಕೋಟಿ ರೂ. , ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ 5 ಕೋಟಿ ರೂ. ದೇಣಿಗೆ ನೀಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos