ಚಿಕ್ಕಬಳ್ಳಾಪುರ: ದೇಶದೆಲ್ಲೆಡೆ ಹಾಗೂ ರಾಜ್ಯದಲ್ಲಡೆ ಲೋಕಸಭಾ ಚುನಾವಣೆ ರಂಗೆರಿದ್ದು ಅಭ್ಯರ್ಥಿಗಳ ಪರ ಮುಖಂಡರು ಮತಯಾಚಿಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಕ್ಷಾ ರಾಮಯ್ಯ ಅವರು ಸ್ಪರ್ಧಿಸುತ್ತಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರು ಇಂದು ಬೃಹತ್ ರೋಡ್ ಶೋ ನಡೆಸಿಲಿದ್ದಾರೆ. ಈ ರೋಡ್ ಶೋನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದು.
ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರವಾಗಿ ಪ್ರಚಾರ ನಡೆಸಿದ ವೇಳೆ ಮಾತನಾಡಿ.ನಾವು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನರಿಗೆ ಗ್ಯಾರಂಟಿ ಘೋಷಣೆ ಮಾಡಿದ್ದೇವು. ಅದರಂತೆ ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದ್ದೇವೆ. ಈ ಭಾರಿಯ ಲೋಕಸಭೆ ಚುನಾವಣೆಯಲ್ಲೂ ನೀವು ಸುಧಾಕರ್ನನ್ನು ಸೋಲಿಸಿ, ರಕ್ಷಾ ರಾಮಯ್ಯ ಕುಟುಂಬ ಪ್ರಾಮಾಣಿಕರು ರಕ್ಷಾ ರಾಮಯ್ಯಗೆ ಮತ ಹಾಕಿ ಎಂದು ಕರೆ ನೀಡಿದರು.
ಈ ವೇಳೆ ಸಿಎಂ ಗೆ ಸಚಿವರಾದ ಡಾ.ಎಂ.ಸಿ.ಸುಧಾಕರ್, ಬೈರತಿ ಸುರೇಶ, ಕೃಷ್ಣಬೈರೇಗೌಡ, ಮಾಜಿ ಶಾಸಕರಾದ ವಿ.ಮುನಿಯಪ್ಪ ಹಾಗೂ ಸ್ಥಳಿಯ ಶಾಸಕ ಪ್ರದೀಪ್ ಈಶ್ವರ್ ಸಾಥ್ ನೀಡಿದರು.