ಸಂತ್ರಸ್ತರ ನೆರವಿಗೆ ಧಾವಿಸಿ ಡಿಸಿಗಳಿಗೆ ಸಿಎಂ ಕಟ್ಟಾಜ್ಞೆ!

ಸಂತ್ರಸ್ತರ ನೆರವಿಗೆ ಧಾವಿಸಿ ಡಿಸಿಗಳಿಗೆ ಸಿಎಂ ಕಟ್ಟಾಜ್ಞೆ!

ಹುಬ್ಬಳ್ಳಿ, ಅ. 26: ನೆರೆ ಪರಿಹಾರಕ್ಕೆ ಹಣದ ತೊಂದರೆ ಇಲ್ಲ. ಸಂತ್ರಸ್ತರ ನೆರವಿಗೆ ಧಾವಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಣಕಾಸಿನ ಸ್ಥಿತಿಗತಿ ನೋಡಿಕೊಂಡು ಮನೆ ಕಟ್ಟಲು 5 ಲಕ್ಷ ಪರಿಹಾರ ಧನ ನಿಗದಿ ಮಾಡಲಾಗಿದೆ. ಭಾಗಶಃ ಮನೆ ಹಾನಿಗೆ 1 ಲಕ್ಷ ಹಣವನ್ನು ನೀಡಲಾಗುತ್ತಿದೆ. ಇದುವರೆಗೂ ಸರ್ಕಾರದಿಂದ 1200 ಕೋಟಿ ಪರಿಹಾರ ಧನ ಬಿಡುಗಡೆ ಮಾಡಿ ನೆರೆ ಪರಿಹಾರ ಕೈಗೊಳ್ಳುಲಾಗಿದೆ ಎಂದರು.

ಇದಕ್ಕೂ ಮುನ್ನಾ ಜಿಲ್ಲಾಡಳಿತದಿಂದ ಮುಖ್ಯ ಮಂತ್ರಿಗಳಿಗೆ ಗೌರವ ರಕ್ಷೆ ನೀಡಲಾಯಿತು.

ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಅರಣ್ಯ ಸಚಿವ ಸಿ.ಸಿ.ಪಾಟೀಲ, ಜಿಲಾಧಿಕಾರಿ ದೀಪಾ ಚೋಳನ್ , ಪೊಲೀಸ್ ಆಯುಕ್ತ ಆರ್.ದಿಲೀಪ್, ಜಿ.ಪಂ.ಸಿಇಓ ಡಾ.ಬಿ.ಸತೀಶ್, ಪೊಲೀಸ್ ವರಿಷಿಷ್ಠಾಧಿಕಾರಿ ವರ್ತಿಕಾ ಕಠಯಾರ್ ಸೇರಿದಂತೆ ಮತ್ತಿತರು ಉಪಸ್ಥಿತಿರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos