ಬೆಂಗಳೂರು: ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ 20ನೇ ಪಂದ್ಯದಲ್ಲಿ ಆಸೀಸ್ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಿತ್ತು. ಈ ಪಂದ್ಯ ಅತ್ಯಂತ ರೋಚಕದಿಂದ ಕೂಡಿತ್ತು. ಏಕೆಂದರೆ ಈ ಪಂದ್ಯ ಇವರಿಬ್ಬರಿಗೂ ಬಹಳ ಮುಖ್ಯವಾದ ಪಂದ್ಯವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಆಸ್ಟ್ರೇಲಿಯಾ – ಪಾಕಿಸ್ತಾನ ನಡುವಿನ ವಿಶ್ವಕಪ್ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ಎನ್. ಚೆಲುವರಾಯಸ್ವಾಮಿ ಸೇರಿದಂತೆ ಮತ್ತಿತರ ಜೊತೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಆಸ್ಟ್ರೇಲಿಯಾ – ಪಾಕಿಸ್ತಾನ ನಡುವಿನ ಪಂದ್ಯವನ್ನ ನೋಡಿ ಆನಂದಿಸಿದ್ದಾರೆ. ಸಾಕಷ್ಟು ಕೆಲಸದ ಒತ್ತಡದ ಮಧ್ಯೆಯೇ ಸಿಎಂ, ಡಿಸಿಎಂ ಸೇರಿದಂತೆ ಮತ್ತಿತರು ಸಚಿವರು ಸೇರಿದಂತೆ ಬೆಂಗಳೂರಿನಲ್ಲಿ ನಡೆದ ವಿಶ್ವಕಪ್ನ ಮೊದಲ ಪಂಡ್ಯವವನ್ನ ನೋಡಿ ಸಂತಸ ವ್ಯಕ್ತಪಡಿಸಿದ್ದಾರೆ.