ಹುಬ್ಬಳ್ಳಿ, ಮೇ .8, ನ್ಯೂಸ್ ಎಕ್ಸ್ ಪ್ರೆಸ್: ರಾಜ್ಯದ ಅಭಿವೃದ್ದಿಗೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಇವರ ಕಾರ್ಯ ಶ್ಲಾಘನೀಯ ಎಂದು ಸಮ್ಮಿಶ್ರ ಸರ್ಕಾರ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಕೊಂಡಾಡಿದ್ದಾರೆ.ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಬುಧವಾರ ಮಾತನಾಡಿದ ಅವರು, ಹಿಂದೆ ಬಿಜೆಪಿಯ ಅಧಿಕಾರಾವಧಿಯಲ್ಲಿ ಮೂರು ಜನ ಮುಖ್ಯಮಂತ್ರಿ ಆಗಿದ್ದಾರೆ. ಆದರೆ, ಭ್ರಷ್ಟಾಚಾರ ಮಾಡಿ 6 ಮಂತ್ರಿಗಳು ಜೈಲಿಗೆಹೋಗಿದ್ದಾರೆ. ಅಂತವರಿಗೆ ಯಾಕೆ? ಜನ ಮತ ಕೊಡ್ತಾರೆ ಎಂದು ಪ್ರ ಶ್ನಿಸಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ಕಸಿದುಕೊಂಡಿದ್ದು ತಪ್ಪು ಎನ್ನೋ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ನಮ್ಮ ಶಾಸಕರು ಅಭಿಮಾನದಿಂದ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿ ಎಂದು ಅವರ ಅಭಿಪ್ರಾಯ ಹೇಳ್ತಾರೆ. ಅವರು ಹೇಳಿದಾಗೆ ಹೇಗಾಗುತ್ತೆ. ಇವಾಗ ಖುರ್ಚಿ ಖಾಲಿ ಇಲ್ಲವಲ್ಲ ಎಂದು ಸಿದ್ದರಾಮಯ್ಯ ಪ್ರತಿಕ್ರಿಯೇ ನೀಡಿದ್ದಾರೆ.